ಬೆಂಗಳೂರು : ನನ್ನ ಸಿಎಂ ಸ್ಥಾನ ಗಟ್ಟಿಯಾಗಿದೆ ಎಂಬ ಸಿದ್ದರಾಮಯ್ಯರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಹೇಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ನಾವ್ಯಾರು ಅದನ್ನು ಪ್ರಶ್ನೆ ಮಾಡಿಲ್ಲ. ಮೇಲಾಗಿ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.
ಸದ್ಯ ನನಗೆ ಆರೋಗ್ಯದಲ್ಲಿ ಸರಿಯಿಲ್ಲ. ಹೀಗಾಗಿ ನಾನು ವಿಶ್ರಾಂತಿಯಲ್ಲಿದ್ದೇನೆ ಎಂದರು. ಬಳಿಕ ಶಾಸಕರ ದೆಹಲಿ ಪ್ರವಾಸದ ಕುರಿತ ಪ್ರಶ್ನೆಗೆ ಉತ್ತರಿಸಿ, ನನಗೆ ಆರೋಗ್ಯದಲ್ಲಿ ಸರಿಯಿಲ್ಲ. ಹೀಗಾಗಿ ನಾನು ವಿಶ್ರಾಂತಿಯಲ್ಲಿದ್ದೇನೆ. ಯಾರು ದೆಹಲಿಗೆ ಹೋಗಿದ್ದಾರೆ, ಏತಕ್ಕಾಗಿ ಹೋಗಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ನನಗೆ ಯಾವುದೇ ಮಾಹಿತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಪರಿಷತ್ ಸದಸ್ಯರೊಂದಿಗಿನ ಸಭೆಯ ಕುರಿತು ಪ್ರತಿಕ್ರಿಯಿಸಿ, ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಕುರಿತು ಚರ್ಚಿಸಲು ಸದಸ್ಯರು ಬಂದಿದ್ದರು. ನಮ್ಮ ಪಕ್ಷದವರನ್ನು ಸಭಾಪತಿ ಮತ್ತು ಉಪಾಸಭಾಪತಿಯನ್ನಾಗಿ ಮಾಡುವಂತೆ ಕೋರಿದ್ದಾರೆ. ಅದರ ಬಗ್ಗೆ ಚರ್ಚಿಸಿ ಮುಂದೆ ಏನು ಮಾಡಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.