ಬಳ್ಳಾರಿ: ಕಾಂಗ್ರೆಸ್, ಜೆಡಿಎಸ್ ಎರಡೂ ಪಕ್ಷಗಳು ಪರಿವಾರವಾದಿ ಪಕ್ಷಗಳಾಗಿವೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಹೇಳಿದರು. ಬಿಜೆಪಿ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿ, ಜೆಡಿಎಸ್ಗೆ ಮತ ಹಾಕಿದರೆ ಅದು ಕಾಂಗ್ರೆಸ್ಗೆ ಮತ ಹಾಕಿದಂತೆ ಎಂದರು.
ಈ ಬಾರಿ ನಡೆಯುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಪೂರ್ಣ ಬಹುಮತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇನ್ನೂ 2 ಗಂಟೆ ತಡವಾಗಿ ಬಂದಿರುವುದಕ್ಕೆ ಕ್ಷಮೆ ಕೋರುತ್ತೇನೆ. ನಾನು ಸಂಡೂರು ಭೂಮಿಗೆ ಬಂದಿದ್ದೇನೆ.
ಸಂಡೂರಿನ ಭೂಮಿಯ ಕುಮಾರಸ್ವಾಮಿಗೆ ನಮಸ್ಕರಿಸುವೆ, ವೀರ ಆಂಜನೇಯ ಅಂಜನಾದ್ರಿ ಭೂಮಿ, ಹಕ್ಕಬುಕ್ಕ ಭೂಮಿ, ಶ್ರೀಕೃಷ್ಣ ದೇವರಾಯ ಭೂಮಿ ಇದಾಗಿದೆ ಎಂದರು. ಸಿದ್ದರಾಮಯ್ಯ ಸರ್ಕಾರ ಇದ್ದಾಗ ಪಿಎಫ್ಐ ಕಾರ್ಯಕರ್ತರ ಮೇಲಿದ್ದ ಪ್ರಕರಣಗಳನ್ನು ವಾಪಸ್ ಪಡೆದುಕೊಂಡಿದ್ದರು. ಆದರೆ ಮೋದಿ ಈ ಸಂಘಟನೆಯನ್ನೇ ಬ್ಯಾನ್ ಮಾಡಿದ್ದಾರೆ ಎಂದರು.
ಕಳೆದ ಬಾರಿ ಭೇಟಿ ನೀಡಿದ್ದಾಗ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಬೆಳಗಾವಿ ಪ್ರಮುಖ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಭಿನ್ನಾಭಿಪ್ರಾಯ, ಅಸಮಾಧಾನ ಬಿಟ್ಟು ಕೆಲಸ ಮಾಡಿ. ಯಾವುದೇ ಗುಂಪುಗಾರಿಕೆ, ವ್ಯಕ್ತ ಪ್ರತಿಷ್ಠೆಗೆ ಅವಕಾಶ ಇಲ್ಲ ಎಂದು ಅಮಿತ್ ಶಾ ಖಡಕ್ ವಾರ್ನಿಂಗ್ ನೀಡಿದ್ದರು.
ಸಮಾವೇಶದಲ್ಲಿ ಬಳ್ಳಾರಿ ಜಿಲ್ಲಾ ಬಿಜೆಪಿ ಘಟಕದಿಂದ ಅಮಿತ್ ಶಾಗೆ ಸನ್ಮಾನ ಮಾಡಲಾಯಿತು. ಪೇಟ ತೊಡಿಸಿ, ಶಾಲು ಹೊದಿಸಿ, ಹಾರ ಹಾಕಿ ಬೆಳ್ಳಿ ಗದೆ ನೀಡಿ, ಕುಮಾರಸ್ವಾಮಿ ದೇಗುಲದ ಭಾವಚಿತ್ರವನ್ನು ಕಾಣಿಕೆಯಾಗಿ ನೀಡಲಾಯಿತು.