Friday, March 24, 2023
spot_img
- Advertisement -spot_img

ಜೆಡಿಎಸ್‌, ಕಾಂಗ್ರೆಸ್‌ ಪಕ್ಷ​ಗ​ಳಿಂದ ಕರ್ನಾಟಕದ ಕಲ್ಯಾಣ ಅಸಾಧ್ಯ : ಕೇಂದ್ರ ಗೃಹ ಸಚಿವ ಅಮಿತ್‌ ಶಾ

ಬಸವಕಲ್ಯಾಣ/ಬೀದರ್‌: ಜೆಡಿಎಸ್‌, ಕಾಂಗ್ರೆಸ್‌ ಇವೆರಡೂ ಪರಿವಾರದ ಪಕ್ಷವಾಗಿದ್ದು, ಇಂಥ ಪಕ್ಷ​ಗ​ಳಿಂದ ಕರ್ನಾಟಕದ ಕಲ್ಯಾಣ ಅಸಾಧ್ಯ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಲ್ಲಿ​ಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯ​ವಾ​ಡಿ​ದ​ರು.

ಬಿಜೆಪಿಯ ವಿಜಯ ಸಂಕಲ್ಪ ರಥಯಾತ್ರೆಗೆ ಚಾಲನೆ ನೀಡಿ ಮಾತನಾಡಿ, ಕೆಪಿ​ಸಿಸಿ ಅಧ್ಯಕ್ಷ ಡಿ.ಕೆ.​ಶಿ​ವ​ಕು​ಮಾರ್‌ ಹಾಗೂ ಪ್ರತಿ​ಪಕ್ಷ ನಾಯಕ ಸಿದ್ದ​ರಾ​ಮಯ್ಯ ಮುಖ್ಯ​ಮಂತ್ರಿ ಗಾದಿಗೆ ಟವೆಲ್‌ ಹಾಕಿದ್ದಷ್ಟೇ ಅಲ್ಲ, ಕಾಂಗ್ರೆ​ಸ್‌​ನಲ್ಲಿ ಆ ಸ್ಥಾನ​ಕ್ಕಾಗಿ ಇನ್ನೂ 10 ಮಂದಿ ಹಗಲುಗನಸು ಕಾಣುವುದ​ರಲ್ಲೇ ತಲ್ಲೀ​ನ​ರಾ​ಗಿ​ದ್ದಾರೆ. ರಾಜ್ಯ​ದಲ್ಲಿ ನಾವು ಸರ್ಕಾರ ಮಾಡುತ್ತೇವೆ ಎಂದು ಪದೇ ಪದೆ ಹೇಳುವ ಕಾಂಗ್ರೆಸ್‌, ಮೊದಲು ತನ್ನ ನಾಯಕ ಯಾರೆಂಬುದನ್ನು ತೀರ್ಮಾನಿಸಲಿ ಎಂದ​ರು.

ಕಾಂಗ್ರೆ​ಸ್‌ಗೆ ಜನಹಿತಕ್ಕಿಂತ ಅಧಿಕಾರ ಮುಖ್ಯ, ಆದರೆ, ಬಿಜೆಪಿಗೆ ರಾಜ್ಯದ ಬಡವರ ಕಲ್ಯಾಣದ, ಅಭಿವೃದ್ಧಿಯ ಗುರಿಯೇ ನಮ್ಮ ಸಂಕಲ್ಪವಾಗಿದೆ ಎಂದರು. ಕಾಂಗ್ರೆಸ್‌ ಅಧ್ಯಕ್ಷರಿಗೀಗ ಮುಖ್ಯ​ಮಂತ್ರಿ ರೇಸ್‌ಗೆ ಬರಲಾಗಲ್ಲ, ಹೀಗಾಗಿ ಪುತ್ರನ ಮೇಲೆ ವ್ಯಾಮೋಹ ಬಂದಿದೆ. ಪುತ್ರ​ನಿಗೆ ಮುಖ್ಯ​ಮಂತ್ರಿ ಪಟ್ಟದ ಕನಸು ಕಾಣು​ತ್ತಿ​ದ್ದಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮಲ್ಲಿ​ಕಾರ್ಜುನ ಖರ್ಗೆ ವಿರುದ್ಧ ವ್ಯಂಗ್ಯ​ವಾ​ಡಿ​ದ​ರು.

Related Articles

- Advertisement -

Latest Articles