Wednesday, May 31, 2023
spot_img
- Advertisement -spot_img

ಆಕ್ಷೇಪಾರ್ಹ ಪೋಸ್ಟ್ ಹಾಕಿ ಬಂಧನವಾಗಿದ್ದ ನಟ ಚೇತನ್‌ಗೆ ಜಾಮೀನು

ಬೆಂಗಳೂರು: ಫೇಸ್ ಬುಕ್ ಮತ್ತು ಟ್ವಿಟರ್ ಅಲ್ಲಿ ಉರಿಗೌಡ ನಂಜೇಗೌಡ ಬಗ್ಗೆ ಪೋಸ್ಟ್ ವೊಂದನ್ನು ಹಂಚಿಕೊಂಡು ಜೈಲು ಪಾಲಾಗಿದ್ದ ನಟ ಚೇತನ್‌ಗೆ ಜಾಮೀನು ಸಿಕ್ಕಿದೆ.

ಇಪ್ಪತ್ತೈದು ಸಾವಿರ ರೂಪಾಯಿ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತೆ ನೀಡುವಂತೆ ನ್ಯಾಯಾಧೀಶೆ ಲತಾ ಆದೇಶಿಸಿದ್ದಾರೆ.ಶಿವಕುಮಾರ್ ನೀಡಿದ್ದ ದೂರಿನ ಮೇಲೆ ಚೇತನ್ ಬಂಧನವಾಗಿತ್ತು.ಚೇತನ್ ಅವರು ಉರಿಗೌಡ ನಂಜೇಗೌಡ ವಿಚಾರವಾಗಿ ಆಕ್ಷೇಪಾರ್ಹ ಪೋಸ್ಟ್ ಮಾಡಿದ್ದರು. ಈ ಕುರಿತು ಶಿವಕುಮಾರ್ ಎನ್ನುವವರು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ದೂರನ್ನು ಆಧರಿಸಿ ಶೇಷಾದ್ರಿಪುರಂ ಪೊಲೀಸರು ವಶಕ್ಕೆ ಪಡೆದು, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಪೊಲೀಸರು ಹಾಕಿರುವ ಎಫ್‍ ಐಆರ್ ಆಧರಿಸಿ ನ್ಯಾಯಾಲಯವು ಚೇತನ್ ಅವರಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಕಳುಹಿಸಿತ್ತು.

ಈ ಸಂದರ್ಭದಲ್ಲಿ ಚೇತನ್ ಪರ ವಕೀಲರು ಜಾಮೀನಿಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯವು ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತ್ತು.

Related Articles

- Advertisement -

Latest Articles