Wednesday, May 31, 2023
spot_img
- Advertisement -spot_img

ಮಾರ್ಚ್ 1 ರಿಂದ 20 ರವರೆಗೆ ರಾಜ್ಯ ಬಿಜೆಪಿ ಬೃಹತ್ ರಥಯಾತ್ರೆ

ಬೆಂಗಳೂರು : ಮುಂದಿನ ವಿಧಾನಸಭೆ ಎಲೆಕ್ಷನ್ ನಲ್ಲಿ 150 ಗುರಿ ಹೊತ್ತು ಸಾಗುತ್ತಿರುವ ರಾಜ್ಯ ಬಿಜೆಪಿ ಬೃಹತ್ ರಥಯಾತ್ರೆ ಮಾರ್ಚ್ 1 ರಿಂದ 20 ರವರೆಗೆ ರಾಜ್ಯದ ಎಲ್ಲ ಅಸೆಂಬ್ಲಿ ಕ್ಷೇತ್ರಗಳಲ್ಲಿ ಸಂಚರಿಸಲಿದೆ. ಫೆಬ್ರವರಿ 28 ಕ್ಕೆ ಬಿಜೆಪಿ ಕಚೇರಿಯಲ್ಲಿ ಪೂಜೆ ಮಾಡಿ, ವಾಹನ ರಥಗಳನ್ನು 4 ಕೇಂದ್ರಗಳಿಗೆ ಕಳುಹಿಸಿಕೊಡಲಾಗುತ್ತಿದ್ದು, ಅಲ್ಲಿಂದ ಯಾತ್ರೆ ಮುಂದುವರಿಯಲಿದೆ.

ಯಾತ್ರೆಗಳಲ್ಲಿ 50 ಕ್ಕೂ ಹೆಚ್ಚು ರಾಜ್ಯ ಮತ್ತು ರಾಷ್ಟ್ರ ಮಟ್ಟದ ಬಿಜೆಪಿ ನಾಯಕರು ಪಾಲ್ಗೊಳ್ಳುತ್ತಾರೆ. ರಾಜ್ಯದ ಎಲ್ಲ 31 ಜಿಲ್ಲೆಗಳು 224 ವಿಧಾನ ಸಭಾ ಕ್ಷೇತ್ರಗಳ ಸಂಪರ್ಕ ನಡೆಯಲಿದೆ. ನಾಲ್ಕು ರಥಗಳ ಮೂಲಕ ಒಟ್ಟು 8 ಸಾವಿರ ಕಿ.ಮೀ ಯಾತ್ರೆ ಸಂಚರಿಸಲಿದೆ. 150 ಕ್ಕೂ ಹೆಚ್ಚು ರೋಡ್‌ ಶೋ ನಡೆಯಲಿದ್ದು, 4 ಕೋಟಿ ಜನರನ್ನು ಸಂಪರ್ಕಿಸಲಾಗುವುದು. ಯಾತ್ರೆಯ ಅವಧಿ 20 ದಿನಗಳಾಗಿದ್ದು, ಗೆಲುವು ಸಾಧಿಸೋದು , ಮೊದಲ ಬಾರಿಗೆ ಸ್ಪಷ್ಟ ಬಹುಮತ ಪಡೆದು ದಾಖಲೆ ಸೃಷ್ಟಿಸೋದು ಇದರ ಗುರಿ ಎಂದು ರಾಜ್ಯದ ಸಚಿವರಾದ ಸಿಸಿ ಪಾಟೀಲ್ , ಎನ್ ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಮಾರ್ಚ್ 25 ರಂದು ದಾವಣಗೆರೆಯಲ್ಲಿ ಮೋದಿ ನೇತೃತ್ವದಲ್ಲಿ ಮೆಗಾ ರ್ಯಾಲಿ ನಡೆಯಲಿದೆ. ಬಿಜೆಪಿ ಸರ್ಕಾರದ ಸಾಧನೆ, ಕಾಂಗ್ರೆಸ್ ಹುಸಿ ಭರವಸೆ- ದೇಶ ಕೊಳ್ಳೆ ಹೊಡೆದುದನ್ನು ತಿಳಿಸ್ತೇವೆ ಎಂದರು. ಅಂದಹಾಗೆ ಮಾರ್ಚ್ ಮೊದಲ ವಾರ ಆರಂಭ ಆಗಲಿರುವ ಬಿಜೆಪಿ ರಥಯಾತ್ರೆಗೆ ಬಿಜೆಪಿ ರಥಯಾತ್ರೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಕೇಂದ್ರ ಸಚಿವ ಅಮಿತ್ ಷಾ, ರಾಜನಾಥ್ ಸಿಂಗ್ ವಿವಿಧ ಭಾಗಗಳಲ್ಲಿ ಚಾಲನೆ ನೀಡಲಿದ್ದಾರೆ.

Related Articles

- Advertisement -

Latest Articles