Tuesday, November 28, 2023
spot_img
- Advertisement -spot_img

ಬಿಜೆಪಿ ಹಂತ ಹಂತವಾಗಿ ಉದ್ಯೋಗಾವಕಾಶಗಳನ್ನು ಒದಗಿಸಲಿದೆ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ

ಶಿಮ್ಲಾ : ಬಿಜೆಪಿ ಸರ್ಕಾರವು ರಾಜ್ಯಕ್ಕೆ ಏಕರೂಪ ನಾಗರಿಕ ಸಂಹಿತೆಯನ್ನು ತರಲಿದೆ. ಈ ಉದ್ದೇಶಕ್ಕಾಗಿ ತಜ್ಞರ ಸಮಿತಿಯನ್ನು ರಚಿಸಲಾಗುವುದು ಮತ್ತು ಅವರ ವರದಿಯ ಆಧಾರದ ಮೇಲೆ ರಾಜ್ಯದಲ್ಲಿ ಯುಸಿಸಿ ಜಾರಿಗೆ ತರಲಾಗುವುದು
ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು.


ಪ್ರಣಾಳಿಕೆ ಕರಡು ರಚನೆಗೆ ಸಾರ್ವಜನಿಕರಿಂದ ಸಲಹೆಗಳನ್ನು ಪಡೆಯಲು ಪಕ್ಷವು ಸಮಿತಿಯನ್ನು ರಚಿಸಿತ್ತು. 11 ಬದ್ಧತೆಗಳ ಕುರಿತು ಸಂಕಲ್ಪ ಪತ್ರ ಬಿಡುಗಡೆಗೊಳಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮಾತನಾಡಿದರು.
ಈ ಬದ್ಧತೆಗಳು ಸಮಾಜದಲ್ಲಿ ಏಕರೂಪತೆಯನ್ನು ತರುತ್ತವೆ. ಯುವಕರು ಮತ್ತು ರೈತರನ್ನು ಸಬಲಗೊಳಿಸುತ್ತವೆ, ತೋಟಗಾರಿಕೆಯನ್ನು ಬಲಪಡಿಸುತ್ತವೆ, ಸರ್ಕಾರಿ ನೌಕರರಿಗೆ ನ್ಯಾಯವನ್ನು ನೀಡುತ್ತವೆ ಮತ್ತು ಧಾರ್ಮಿಕ ಪ್ರವಾಸೋದ್ಯಮವನ್ನು ಮುನ್ನಡೆಸುತ್ತವೆ ಎಂದು ಹೇಳಿದರು.

ಬಿಜೆಪಿ ಸರ್ಕಾರವು ಹಂತ ಹಂತವಾಗಿ 8 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶ ಒದಗಿಸಲಿದೆ. ಇದು ಸರ್ಕಾರಿ ಉದ್ಯೋಗಗಳು ಮತ್ತು ಆರ್ಥಿಕ ವಲಯದಲ್ಲಿ ನಡೆಯುತ್ತಿರುವ ಕೆಲಸಗಳನ್ನು ಒಳಗೊಂಡಿರುತ್ತದೆ ಎಂದರು.ಬಿಜೆಪಿ ಸರ್ಕಾರ ‘ಶಕ್ತಿ’ ಕಾರ್ಯಕ್ರಮ ಪ್ರಾರಂಭಿಸಲಿದ್ದು, ಇದರ ಅಡಿಯಲ್ಲಿ ಧಾರ್ಮಿಕ ಸ್ಥಳಗಳು ಮತ್ತು ದೇವಾಲಯಗಳ ಸುತ್ತ ಮೂಲಸೌಕರ್ಯ ಮತ್ತು ಸಾರಿಗೆಯನ್ನು ಅಭಿವೃದ್ಧಿಪಡಿಸಲು 10 ವರ್ಷಗಳ ಅವಧಿಯಲ್ಲಿ ₹ 12,000 ಕೋಟಿ ವ್ಯಯಿಸಲಾಗುವುದು ಎಂದರು. ಇದರೊಂದಿಗೆ ರಾಜ್ಯದಲ್ಲಿ ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಮಾಡಿದೆ.

ಸರ್ಕಾರಿ ಉದ್ಯೋಗಗಳಲ್ಲಿ ಮಹಿಳೆಯರಿಗೆ 33 ಪ್ರತಿಶತ ಮೀಸಲಾತಿ ನೀಡುವುದಾಗಿ ಭರವಸೆ ನೀಡಿದರು. 6-12 ನೇ ತರಗತಿಯ ವಿದ್ಯಾರ್ಥಿನಿಯರಿಗೆ ಸೈಕಲ್ ವಿತರಣೆ ಮತ್ತು ಉನ್ನತ ಶಿಕ್ಷಣ ಪಡೆಯುವವರಿಗೆ ಸ್ಕೂಟಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ. 68 ಸದಸ್ಯ ಬಲದ ಹಿಮಾಚಲ ಪ್ರದೇಶ ವಿಧಾನಸಭೆಗೆ ನವೆಂಬರ್ 12 ರಂದು ಚುನಾವಣೆ ನಡೆಯಲಿದ್ದು, ಭಾರತೀಯ ಜನತಾ ಪಕ್ಷ (ಬಿಜೆಪಿ) ಭಾನುವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ.

Related Articles

- Advertisement -spot_img

Latest Articles