ಬೆಂಗಳೂರು: ಈ ಬಾರಿ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ತಮ್ಮ ಮಕ್ಕಳಿಗೆ ಪಕ್ಷದ ಟಿಕೆಟ್ ನಿರೀಕ್ಷಿಸುತ್ತಿದ್ದವರಿಗೆ ಪ್ರಧಾನಿ ನರೇಂದ್ರ ಮೋದಿ ಶಾಕ್ ಕೊಟ್ಟಿದ್ದಾರೆ.
ಕುಟುಂಬ ರಾಜಕಾರಣ ವಿರೋಧಿಸಿ ಹೊಸ ಮುಖಗಳಿಗೆ ಮಣೆ ಹಾಕುವ ಚಿಂತನೆ ನಡೆಸಿದೆ. ಬಿಜೆಪಿ ಕೇಂದ್ರ ಚುನಾವಣೆ ಸಮಿತಿ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕ ಬಿಜೆಪಿ ಶಾಸಕರ ಪುತ್ರರಿಗೆ ಟಿಕೆಟ್ ನೀಡುವುದಕ್ಕೆ ವಿರೋಧಿಸಿದ್ದಾರೆ.
ಕುಟುಂಬ ರಾಜಕಾರಣ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ ಎಂದು ಅಬ್ಬರಿಸಿದ್ದರು. ಮಾಜಿ ಸಿಎಂ ಬಿಎಸ್ ಯಡಿಯೂಪ್ಪರಂತಹ ನಾಯಕರೇ ತಮ್ಮ ಮಕ್ಕಳಿಗೆ ಈ ಬಾರಿ ಟಿಕೆಟ್ ಕೊಡಿಸಲು ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಆದ್ರೆ, ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಸಹಮತ ವ್ಯಕ್ತಪಡಿಸಿಲ್ಲ. ಮೋದಿ ಅವರ ನಡೆಗೆ ಬಿಎಸ್ ಯಡಿಯೂರಪ್ಪ ಸೇರಿದಂತೆ ರಾಜ್ಯ ನಾಯಕರು ಅಸಮಾಧಾನಗೊಂಡಿದ್ದಾರೆ. ಹೀಗಾಗಿ ಪಟ್ಟಿ ಬಿಡುಗಡೆಗೆ ವಿಳಂಬವಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಬಿಜೆಪಿ ಶಾಸಕ ಜಿಹೆಚ್ ತಿಪ್ಪಾರೆಡ್ಡಿ, ಎಂಟಿಬಿನಾಗರಾಜ್, ಆನಂದ್ ಮಾಮನಿ ಜಿ.ಎಂ. ಸಿದ್ದೇಶ್ವರ, ಆನಂದ್ ಸಿಂಗ್ , ಸಚಿವ ವಿ ಸೋಮಣ್ಣ ಸೇರಿ ಹಲವರು ಮಕ್ಕಳಿಗೆ ನೀಡಲು ಕೇಳಿಕೊಂಡಿದ್ದರು.