Wednesday, May 31, 2023
spot_img
- Advertisement -spot_img

ಚುನಾವಣೆಯನ್ನು ಯುದ್ಧವಾಗಿ ನೋಡಬೇಕು : ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್

ಮೈಸೂರು: ಕಾಂಗ್ರೆಸ್ ಒಡೆದ ಮನೆಯಾಗಿದ್ದು, ಡಿಕೆ ಶಿವಕುಮಾರ್, ಸಿದ್ದರಾಮಯ್ಯ ನಡುವೆ ಭಿನ್ನಾಭಿಪ್ರಾಯವಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ಅಭಿಪ್ರಾಯಪಟ್ಟರು.

ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ನಲ್ಲಿ ವಾತಾವರಣ ಸರಿ ಇಲ್ಲದೇ ಇರೋದ್ರಿಂದ ಪಕ್ಷವು ತನ್ನ ಅಭ್ಯರ್ಥಿ ಪಟ್ಟಿಯನ್ನು ಪ್ರಕಟಿಸಿಲ್ಲ ಇನ್ನೂ ಜೆಡಿಎಸ್ ನವರು ಅಭ್ಯರ್ಥಿಗಳನ್ನು ನಿರ್ಧರಿಸಲು ಸಂಸದೀಯ ಮಂಡಳಿ ಇಲ್ಲದ ಕಾರಣ ಪಕ್ಷದ ಪಟ್ಟಿಯನ್ನು ಮನೆಯಲ್ಲಿಯೇ ಸಿದ್ಧಪಡಿಸಿದ್ದಾರೆ ಎಂದು ವ್ಯಂಗ್ಯವಾಡಿದರು.

ಚುನಾವಣೆಯನ್ನು ಯುದ್ಧವಾಗಿ ನೋಡಬೇಕು ಮತ್ತು ಜೆಡಿಎಸ್‌ನಂತಹ ಪ್ರತಿಸ್ಪರ್ಧಿ ಪಕ್ಷಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬಾರದು, ವಿಶೇಷವಾಗಿ ಮೈಸೂರಿನಲ್ಲಿ ಬಿಜೆಪಿ ಹೆಚ್ಚಿನ ಶಾಸಕರನ್ನು ಆಯ್ಕೆ ಮಾಡಬೇಕಾಗಿದೆ ಎಂದರು. ಬಿಜೆಪಿಯ ಭವಿಷ್ಯವನ್ನು ಕಾರ್ಯಕರ್ತರು ನಿರ್ಧರಿಸುತ್ತಾರೆ ಮತ್ತು ಸಂಪೂರ್ಣ ಬಹುಮತದಿಂದ ಮಾತ್ರ ಪಕ್ಷವು ಬಯಸಿದ್ದನ್ನು ಕಾರ್ಯಗತಗೊಳಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಎಂದು ತಿಳಿಸಿದರು.

ಹೀಗಾಗಿ ಪಕ್ಷದ ಆಗು ಹೋಗು ಎಲ್ಲ ಗೊತ್ತಿರೋದು ಅದರ ಮುನ್ನುಡಿ ಬರೆಯೋರು ಕಾರ್ಯಕರ್ತರು ಮಾತ್ರವೇ ಎಂದು ಹೇಳಿದರು. ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷದ ಅಭ್ಯರ್ಥಿಗಳು ಆಯ್ಕೆಯಾಗುವಂತೆ ನೋಡಿಕೊಳ್ಳಬೇಕು ಎಂದು ಕರೆ ನೀಡಿದರು.

Related Articles

- Advertisement -

Latest Articles