Sunday, September 24, 2023
spot_img
- Advertisement -spot_img

ಪ್ರಕಾಶ್ ರೈಗೆ ಕಪ್ಪು ಪಟ್ಟಿ ಪ್ರದರ್ಶನ, ಮಸಿ ಬಳಿಯಲು ಯತ್ನ

ಕಲಬುರಗಿ: ಪ್ರಕಾಶ್ ರೈ ಆಗಮನ ಹಿನ್ನೆಲೆಯಲ್ಲಿ ಶ್ರೀರಾಮ್ ಸೇನೆಯ ಕಾರ್ಯಕರ್ತರಿಂದ ಪ್ರತಿಭಟನೆ ನಡೆದಿದ್ದು, ಪ್ರಕಾಶ್ ರೈ ಗೆ ಮಸಿ ಬಳಿಯಲು ಶ್ರೀರಾಮ್ ಸೇನೆಯ ಕಾರ್ಯಕರ್ತರು ಪ್ರಯತ್ನಿಸಿದ್ದಾರೆ.

ರಂಗಮಂದಿರದಲ್ಲಿ ನಾಟಕ ಮತ್ತು ಸಂವಾದ ಕಾರ್ಯಕ್ರಮಕ್ಕೆ ಪ್ರಕಾಶ್ ರೈ ಆಗಮನ ಹಿನ್ನೆಲೆ ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಸನಾತನ ಧರ್ಮ ಬಗ್ಗೆ ಅವಹೇಳನಕಾರಿ ಟೀಕೆ ಹಿನ್ನೆಲೆ ಶ್ರೀರಾಮ್ ಸೇನೆ ಕಾರ್ಯಕರ್ತರು ಕಪ್ಪು ಪಟ್ಟಿ ಪ್ರದರ್ಶನ ಮಾಡಿದ್ದಾರೆ.

ಇದನ್ನೂ ಓದಿ: ‘ಗ್ಯಾರಂಟಿ’ ಸರ್ಕಾರ ಗುಲಾಮಿ ಮನಸ್ಥಿಯವರು : ಸಿ ಟಿ ರವಿ

ಕಾರ್ಯಕರ್ತರು ಪ್ರಕಾಶ್‌ ರೈ ವಿರುದ್ಧ ಘೋಷಣೆ ಕೂಗಿದ್ದಾರೆ, ಪರಿಸ್ಥಿತಿ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಶ್ರೀರಾಮ ಸೇನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles