Wednesday, November 29, 2023
spot_img
- Advertisement -spot_img

ಪೊಲೀಸರು ವಶಕ್ಕೆ ಪಡೆಯುವ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಚೈತ್ರಾ ಕುಂದಾಪುರ!

ಉಡುಪಿ : ಉದ್ಯಮಿಗೆ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ಏಳು ಕೋಟಿ ರೂಪಾಯಿ ವಂಚಿಸಿರುವ ಆರೋಪದ ಮೇಲೆ ಹಿಂದುತ್ವ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಮಂಗಳವಾರ ಸಿಸಿಬಿ ಪೊಲೀಸರು ಉಡುಪಿಯ ಕೃಷ್ಣ ಮಠದ ಬಳಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಚೈತ್ರಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೃಷ್ಣ ಮಠದ ಪಾಕಿಂಗ್ ಏರಿಯಾದಲ್ಲಿ ಚೈತ್ರಾ ಮತ್ತು ಶ್ರೀಕಾಂತ್ ನಾಯಕ್ ಪೆಲತ್ತೂರು ಎಂಬವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಈ ವೇಳೆ ಹೈಡ್ರಾಮಾ ಮಾಡಿದ ಚೈತ್ರಾ, ಕೈಬಳೆ ಒಡೆದುಕೊಂಡು, ಉಂಗುರ ನುಂಗಲು ಯತ್ನಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ. ರಾತ್ರಿ ಚೈತ್ರಾ ಮತ್ತು ಶ್ರೀಕಾಂತ್ ಅವರನ್ನು ವಶಕ್ಕೆ ಪಡೆದಿದ್ದ ಸಿಸಿಬಿ ಪೊಲೀಸರು, ಇಂದು (ಸೆ. 13) ಉಡುಪಿಯಿಂದ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಇದನ್ನೂ ಓದಿ : ಉದ್ಯಮಿಗೆ ಚೈತ್ರಾ ಕುಂದಾಪುರ ಪಂಗನಾಮ ಹಾಕಿದ್ದೇಗೆ ಗೊತ್ತಾ?

ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರು ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರ ಮುಗ್ಧತೆಯನ್ನು ಬಳಸಿಕೊಂಡ ಚೈತ್ರಾ, ನಾಲ್ಕೈದು ಜನರ ತಂಡದ ಮೂಲಕ ನಕಲಿ ಬಿಜೆಪಿ- ಆರೆಸ್ಸೆಸ್ ನಾಯಕರನ್ನು ಸೃಷ್ಟಿ ಮಾಡಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಮೂರು ಹಂತಗಳಲ್ಲಿ ಏಳು ಕೋಟಿ ರೂಪಾಯಿ ಹಣ ಪೀಕಿಸಿದ್ದಾಳೆ ಎಂದು ಆರೋಪಿಸಲಾಗಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles