Sunday, September 24, 2023
spot_img
- Advertisement -spot_img

ಇತ್ತ ಸ್ವಾಮೀಜಿ ಅರೆಸ್ಟ್‌! ಕಸ್ಟಡಿಯಲ್ಲಿದ್ರೂ ಚೈತ್ರಾ ಫುಲ್‌ ಖುಷ್

ಬೆಂಗಳೂರು: ಉದ್ಯಮಿಗೆ ಕೋಟಿಗಟ್ಟಲೆ ವಂಚನೆ ಮಾಡಿರುವ ಆರೋಪದಲ್ಲಿ ಸಿಸಿಬಿ ಕಸ್ಟಡಿಯಲ್ಲಿರುವ ಚೈತ್ರಾ ಕುಂದಾಪುರ ಇಂದು ಫುಲ್‌ ಖುಷಿಯಾಗಿ ಕಾಣಿಸಿಕೊಂಡಿದ್ದಾರೆ.

ಮತ್ತೊಂದೆಡೆ ಇದೇ ಪ್ರಕರಣದಲ್ಲಿ ಆರೋಪಿಯಾಗಿರುವ ಹಾಲಶ್ರೀ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರು ಸ್ವಾಮೀಜಿ ಅರೆಸ್ಟ್‌ ಆಗಿದ್ದಾರೆ ಎಂದು ಹೇಳಿದ ಕೂಡಲೇ ಚೈತ್ರಾ ಫುಲ್‌ ಖುಷಿಯಿಂದ ಸಿಸಿಬಿ ಅಧಿಕಾರಿಗಳೊಂದಿಗೆ ತೆರಳಿದರು.

ಸ್ವಾಮೀಜಿ ಸಿಗಲಿ ದೊಡ್ಡವರ ಹೆಸರು ಹೊರ ಬರುತ್ತೆ: ಚೈತ್ರಾ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ ಬಳಿಕ ಹೇಳಿಕೆ ನೀಡಿದ್ದ ಚೈತ್ರಾ, ಹಾಲಶ್ರೀ ಸ್ವಾಮೀಜಿ ಸಿಗಲಿ.. ಈ ಪ್ರಕರಣದಲ್ಲಿ ದೊಡ್ಡ ದೊಡ್ಡವರ ಹೆಸರು ಹೊರಬರಲಿದೆ ಎಂದಿದ್ದರು. ಇದೀಗ ಸ್ವಾಮೀಜಿ ಅರೆಸ್ಟ್‌ ಬೆನ್ನಲ್ಲೇ ಚೈತ್ರಾ ಅವರ ನಡೆ ಹಲವು ಅನುಮಾನಗಳನ್ನು ಹುಟ್ಟುಹಾಕಿದೆ.

ಬಿಜೆಪಿ ನಾಯಕರೊಂದಿಗೆ ಗುರುತಿಸಿಕೊಂಡಿದ್ದ ಚೈತ್ರಾ ಕುಂದಾಪುರ ಹಿಂದುತ್ವ ಸಂಘಟನೆಗಳಲ್ಲೂ ಸಕ್ರಿಯರಾಗಿದ್ದರು. ಈ ಹಿಂದೆ ಚೈತ್ರಾ ಅವರ ಬಗ್ಗೆ ಬಿಜೆಪಿಯ ಹಲವು ನಾಯಕರು ಮೆಚ್ಚುಗೆ ಕೂಡ ವ್ಯಕ್ತಪಡಿಸಿದ್ದರು. ಆದರೆ, ಚೈತ್ರಾ ಅವರನ್ನು ಸಿಸಿಬಿ ವಶಕ್ಕೆ ಪಡೆದ ನಂತರ, ಚೈತ್ರಾಗೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಬಿಜೆಪಿಯವರೇ ಹೇಳಿದ್ದಾರೆ.

ಇದನ್ನೂ ಓದಿ: BREAKING NEWS : ಚೈತ್ರಾ ಕುಂದಾಪುರ ವಂಚನೆ ಪ್ರಕರಣ, ಒರಿಸ್ಸಾದಲ್ಲಿ ಹಾಲಶ್ರೀ ಅರೆಸ್ಟ್

ಇದೀಗ ಹಾಲಶ್ರೀ ಸ್ವಾಮೀಜಿ ಬಂಧನವಾಗಿರುವುದರಿಂದ ಚೈತ್ರಾ ಕುಂದಾಪುರ ಹೇಳಿದಂತೆ ಈ ಕೇಸ್‌ನಲ್ಲಿ ಹಲವು ಪ್ರಭಾವಿಗಳು ಹೆಸರು ಹೊರಬರಲಿದೆಯಾ ಎನ್ನುವ ಪ್ರಶ್ನೆ ಎದುರಾಗಿದ್ದು, ಒಂದು ವೇಳೆ ಸ್ವಾಮೀಜಿ ಬಾಯಿಬಿಟ್ಟರೆ ಯಾರೆಲ್ಲರ ಹೆಸರು ಬಯಲಿಗೆ ಬರಲಿದೆ ಎಂಬುದನ್ನು ಕಾದುನೋಡಬೇಕಿದೆ.

ಬಿಜೆಪಿ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಚೈತ್ರಾ ಕುಂದಾಪುರ ಉದ್ಯಮಿಯೊಬ್ಬರಿಗೆ 5 ಕೋಟಿ ವಂಚನೆ ನಡೆಸಿರುವ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿ ತಲೆಮರೆಸಿಕೊಂಡಿದ್ದ ಹಿರೇಹಡಗಲಿ ಮಠದ ಅಭಿನವ ಹಾಲಶ್ರೀ ಸ್ವಾಮೀಜಿಯನ್ನ ಸಿಸಿಬಿ ಪೊಲೀಸರು ಒಡಿಶಾದಲ್ಲಿ ಬಂಧಿಸಿದ್ದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles