Saturday, June 10, 2023
spot_img
- Advertisement -spot_img

ಡಿಕೆಶಿಯಿಂದಾಗಿ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಿಲ್ಲ: ಛಲವಾದಿ ನಾರಾಯಣಸ್ವಾಮಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ರಿಂದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಿಲ್ಲ ಎಂದು ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.

ಕಾಂಗ್ರೆಸ್ ನೆಲೆ ಕಳೆದುಕೊಂಡಿರುವುದು ಡಿಕೆಶಿ ಹೇಳಿಕೆಯಿಂದ ಗೊತ್ತಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಕೈ ಕೆಳಗೆ ಕೆಲಸ ಮಾಡುವುದನ್ನು ಇಷ್ಟಪಡುತ್ತೇನೆ. ಖರ್ಗೆ ಏನು ಬಯಸುತ್ತಾರೋ ಅದನ್ನು ಈಡೇರಿಸುವ ಕೆಲಸ ನನ್ನದು ಎಂದು ಡಿಕೆ ಶಿವಕುಮಾರ್ ಇತ್ತೀಚೆಗೆ ಹೇಳಿದ್ದರು. ಖರ್ಗೆ ನಮ್ಮ ಪಕ್ಷದ ಆಸ್ತಿ. ರಾಜ್ಯಕ್ಕೆ ಅವರ ಸೇವೆ ಅಗತ್ಯವಿದೆ. ಮಲ್ಲಿಕಾರ್ಜುನ ಖರ್ಗೆ ನನಗಿಂತ ರಾಜಕೀಯದಲ್ಲಿ ದೊಡ್ಡವರು ಎಂದು ಡಿಕೆಶಿ ಹೊಗಳಿದ್ದರು.

ಎಸ್ಎಂ ಕೃಷ್ಣರನ್ನು ಮುಖ್ಯಮಂತ್ರಿ ಮಾಡಿದರು. ಆಗಲೂ ಮಲ್ಲಿಕಾರ್ಜುನ ಖರ್ಗೆಗೆ ಮುಖ್ಯಮಂತ್ರಿ ಹುದ್ದೆ ತಪ್ಪಿಸಲಾಗಿತ್ತು. 2013ರಲ್ಲಿ ಡಾ. ಜಿ ಪರಮೇಶ್ವರ್ ಮುಖ್ಯಮಂತ್ರಿಯಾಗುವ ಅವಕಾಶ ತಪ್ಪಿಸಲಾಯಿತು. ಪರಮೇಶ್ವರ್ ಅವರನ್ನು ಸೋಲಿಸಿ ಮುಖ್ಯಮಂತ್ರಿಯಾಗದಂತೆ ಮಾಡಲಾಯಿತು ಎಂದು ಅಭಿಪ್ರಾಯಪಟ್ಟರು.

Related Articles

- Advertisement -spot_img

Latest Articles