Friday, September 29, 2023
spot_img
- Advertisement -spot_img

ಚಂದ್ರಬಾಬು ನಾಯ್ಡು 14 ದಿನ ನ್ಯಾಯಾಂಗ ಬಂಧನಕ್ಕೆ

ಹೈದ್ರಾಬಾದ್ : ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಮತ್ತು ಆಂಧ್ರಪ್ರದೇಶದ ಮಾಜಿ ಸಿಎಂ ಎನ್. ಚಂದ್ರಬಾಬು ನಾಯ್ಡು ಅವರನ್ನು ಎಸಿಬಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ವೈಎಸ್‌ಆರ್‌ಸಿಪಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಎನ್. ಚಂದ್ರಬಾಬು ನಾಯ್ಡು ಮೇಲೆ 371 ಕೋಟಿ ರೂ. ಹಗರಣ ಎಸಗಿದ ಗಂಭೀರ ಆರೋಪ ಮೇಲೆ ಶನಿವಾರ ಬೆಳಗ್ಗೆ ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ಹಗರಣವು ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮ (APSSDC) ರಚನೆಗೆ ಸಂಬಂಧಿಸಿದೆ, ಇದು 2014 ರಲ್ಲಿ, ನಿರುದ್ಯೋಗಿ ಯುವಕರಿಗೆ ತರಬೇತಿ ನೀಡುವ ಮತ್ತು ಅನಂತಪುರ ಜಿಲ್ಲೆಯ ಕಿಯಾದಂತಹ ಕೈಗಾರಿಕೆಗಳ ಬಳಿ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಬಂಧವನ್ನು ಬೆಳೆಸುವ ಗುರಿಯನ್ನು ಹೊಂದಿದೆ.

ನಾಯ್ಡು ಮೇಲಿರುವ ಆರೋಪ ಏನು?

ಯುವಕರಿಗೆ ಉದ್ಯೋಗ ತರಬೇತಿ ನೀಡಲು ಅಂದಿನ ಮುಖ್ಯಮಂತ್ರಿ ನಾಯ್ಡು ಅವರ ನೇತೃತ್ವದಲ್ಲಿ ಆಂಧ್ರಪ್ರದೇಶ ರಾಜ್ಯ ಕೌಶಲ್ಯ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗಿದೆ.

ಈ ಸಂಬಂಧ ಟಿಡಿಪಿ ಸರ್ಕಾರವು ಜರ್ಮನ್ ಎಂಜಿನಿಯರಿಂಗ್ ದೈತ್ಯ ಸೀಮೆನ್ಸ್‌ ಕಂಪನಿಯೊಂದಿಗೆ ತಿಳುವಳಿಕೆ ಒಪ್ಪಂದವನ್ನು ಮಾಡಿಕೊಂಡಿತ್ತು. ಸೀಮೆನ್ಸ್, ಇಂಡಸ್ಟ್ರಿ ಸಾಫ್ಟ್‌ವೇರ್ ಇಂಡಿಯಾ ಲಿಮಿಟೆಡ್ ಮತ್ತು ಡಿಸೈನ್ ಟೆಕ್ ಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್ ಸಹಭಾಗಿತ್ವದಲ್ಲಿ ರಾಜ್ಯ ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಈ ಯೋಜನೆಯನ್ನು ಕಾರ್ಯಗತಗೊಳಿಸುವ ಉದ್ದೇಶವನ್ನು ಹೊಂದಿತ್ತು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles