Friday, September 29, 2023
spot_img
- Advertisement -spot_img

ಚಂದ್ರಯಾನ ಸಕ್ಸಸ್‌; ʼಇಸ್ರೋʼ ಅಧ್ಯಕ್ಷರಿಗೆ ಡಿಕೆಶಿ ಸನ್ಮಾನ

ಬೆಂಗಳೂರು: ʼಇಸ್ರೋʼದ ಮಹತ್ವಾಕಾಂಕ್ಷೆಯ ಯೋಜನೆ ಚಂದ್ರಯಾನ-3 ಯಶಸ್ವಿಯಾಗಿರುವ ಹಿನ್ನೆಲೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಇಸ್ರೋಗೆ ಅಭಿನಂದನೆ ಸಲ್ಲಿಸಿದರು. ಅಲ್ಲದೆ, ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್‌ ಅವರನ್ನು ಬೆಂಗಳೂರಿನಲ್ಲಿ ಖುದ್ದು ಭೇಟಿಯಾಗಿ ಸನ್ಮಾನಿಸಿದರು.

ಇಸ್ರೋ ವಿಜ್ಞಾನಿಗಳ ತಂಡವು ಈ ದಿನದ ಚಂದ್ರಯಾನ ಒಟ್ಟಾರೆ ಕಾರ್ಯಾಚರಣೆಯನ್ನು ಬೆಂಗಳೂರಿನಿಂದಲೇ ನಿರ್ವಹಿಸಿದರು. ಹಾಗಾಗಿ, ಡಿ.ಕೆ.ಶಿವಕುಮಾರ್‌ ಅವರು ಇಸ್ರೋ ವಿಜ್ಞಾನಿಗಳ ತಂಡವನ್ನು ಭೇಟಿಯಾಗಿ, ಎಲ್ಲರನ್ನೂ ಸನ್ಮಾನಿಸಿ ಅಭಿನಂದನೆಗಳನ್ನು ತಿಳಿಸಿದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಡಿ.ಕೆ.ಶಿವಕುಮಾರ್‌, ಚಂದ್ರನ ದಕ್ಷಿಣ ಧೃವ ತಲುಪುವ ಚಂದ್ರಯಾನ 3 ಯೋಜನೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಂದು ಬೆಂಗಳೂರಿನ ಇಸ್ರೋ ಕಚೇರಿಗೆ ಭೇಟಿ ನೀಡಿ ಇಸ್ರೋ ಅಧ್ಯಕ್ಷರಾದ ಶ್ರೀ ಎಸ್. ಸೋಮನಾಥ್ ಹಾಗೂ ಅವರ ತಂಡವನ್ನು ಅಭಿನಂದಿಸಿದೆ. ಮಹತ್ವಾಕಾಂಕ್ಷೆಯ ಈ ಯೋಜನೆಯ ಮೂಲಕ ಭಾರತದ ವಿಶ್ವಾಸ ಚಂದ್ರನ ಅಂಗಳವನ್ನು ತಲುಪಿದೆ. ನಮ್ಮ ಇಸ್ರೋದ ಕೀರ್ತಿ ಮತ್ತೊಮ್ಮೆ ವಿಶ್ವವ್ಯಾಪಿ ತಲುಪಿದೆ ಎಂದು ಶ್ಲಾಘಿಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles