Wednesday, May 31, 2023
spot_img
- Advertisement -spot_img

5 ಬೇಡಿಕೆ ಈಡೇರಿಸಲು ಸಿಎಂ ಸಿದ್ದರಾಮಯ್ಯಗೆ ಚೇತನ್ ಮನವಿ

ಬೆಂಗಳೂರು: ನೂತನ ಸಿಎಂ ಸಿದ್ದರಾಮಯ್ಯ ನೂತನ ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ್ದು, ನಟ ಚೇತನ್ ಅಭಿನಂದನೆ ಸಲ್ಲಿಸಿದ್ದಾರೆ, ಜೊತೆಗೆ ಕೆಲವು ಬೇಡಿಕೆಗಳನ್ನು ಈಡೇರಿಸಲು ಮನವಿ ಮಾಡಿದ್ದಾರೆ.

1.ಎಲ್ಲಾ 5 ಚುನಾವಣಾ ಯೋಜನೆಗಳನ್ನು ಜಾರಿಗೊಳಿಸಬೇಕು.2.ಗೋಹತ್ಯೆ ವಿರೋಧಿ ಮಸೂದೆ & ಮತಾಂತರ ವಿರೋಧಿ ಮಸೂದೆಯನ್ನು ತೆಗೆದು ಹಾಕಬೇಕು.3.ಶೇ.4 ಮುಸ್ಲಿಂ OBC ಮೀಸಲಾತಿಯನ್ನು ಮರುಸ್ಥಾಪಿಸಬೇಕು
4.ಜಾತಿ ಗಣತಿಯನ್ನು ಬಹಿರಂಗಪಡಿಸಬೇಕು/ಹೊರಗೆ ತರಬೇಕು, 5.ಎಸ್​​ಟಿ (ST) ಒಳಮೀಸಲಾತಿ ಮತ್ತು ಖಾಸಗಿ ವಲಯದ ಮೀಸಲಾತಿಯನ್ನು (ಜಾತಿ/ಪ್ರದೇಶ/ಇತ್ಯಾದಿ) ಜಾರಿಗೊಳಿಸಬೇಕು. ಸಿದ್ದರಾಮಯ್ಯ ಮೊದಲ ಸಂಪುಟ ಸಭೆಯಲ್ಲಿಯೇ 5 ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ.

ಮುಂದಿನ ದಿನಗಳಲ್ಲಿ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. ಇಂದು ಕೆಲವು ಬೇಡಿಕೆಗಳನ್ನು ಇರಿಸಿದ್ದ ಚೇತನ್, ಸಿದ್ದರಾಮಯ್ಯ ಜೊತೆಯಲ್ಲಿ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಜನರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Related Articles

- Advertisement -

Latest Articles