Friday, September 29, 2023
spot_img
- Advertisement -spot_img

ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ; ಶಾಲೆ ದ್ವೇಷದ ಮಾರುಕಟ್ಟೆ ಆಗ್ತಿದೆ ಎಂದ ರಾಹುಲ್

ನವದೆಹಲಿ: ಉತ್ತರಪ್ರದೇಶದ ಮುಜಾಫರ್‌ನಗರದಲ್ಲಿ ಹೋಮ್‌ ವರ್ಕ್‌ ಮಾಡದ ಕಾರಣಕ್ಕೆ ಮಹಿಳಾ ಶಿಕ್ಷಕಿಯೊಬ್ಬರು ವಿದ್ಯಾರ್ಥಿಗೆ ತನ್ನ ಸಹಪಾಠಿಗಳಿಂದ ಕಪಾಳಮೋಕ್ಷ ಮಾಡಿಸಿರುವ ವಿಚಾರಕ್ಕೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಮತ್ತೊಂದೆಡೆ ಹಿಂದೂ ವಿದ್ಯಾರ್ಥಿಯಿಂದ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಕೂಡ ಈ ಘಟನೆಯನ್ನು ಖಂಡಿಸಿ, ಟ್ವೀಟ್‌ ಮಾಡಿದ್ದಾರೆ.

ಮುಗ್ಧ ಮಕ್ಕಳ ಮನಸ್ಸಿನಲ್ಲಿ ತಾರತಮ್ಯದ ವಿಷ ಬೀಜವನ್ನು ಬಿತ್ತುವುದು, ಶಾಲೆಯಂತಹ ಪವಿತ್ರ ಸ್ಥಳವನ್ನು ದ್ವೇಷದ ಮಾರುಕಟ್ಟೆಯನ್ನಾಗಿ ಮಾಡುತ್ತಿದೆ. ಒಬ್ಬ ಶಿಕ್ಷಕ ದೇಶಕ್ಕೆ ಇದಕ್ಕಿಂತ ಕೆಟ್ಟದ್ದನ್ನು ಮಾಡಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ʼಪಕ್ಷ ಅವಕಾಶ ಕೊಟ್ಟರೆ ಲೋಕಸಭಾ ಚುನಾವಣೆಗೆ ಖಂಡಿತಾ ಸ್ಪರ್ಧಿಸ್ತೇನೆʼ

ಇಂತಹದ್ದೇ ಸೀಮೆಎಣ್ಣೆಯಿಂದ ಬಿಜೆಪಿಯವರು ಭಾರತದ ಮೂಲೆ ಮೂಲೆಗೆ ಬೆಂಕಿ ಹಂಚಿದ್ದಾರೆ ಎಂದು ದೂರಿರುವ ರಾಹುಲ್‌ ಗಾಂಧಿ, ಮಕ್ಕಳು ಭಾರತದ ಭವಿಷ್ಯ, ಅವರನ್ನು ದ್ವೇಷಿಸಬೇಡಿ. ನಾವೆಲ್ಲರೂ ಒಟ್ಟಾಗಿ ಪ್ರೀತಿಯನ್ನು ಕಲಿಸಬೇಕು ಎಂದು ಕಿವಿಮಾತು ಹೇಳಿದ್ದಾರೆ.

ಏನಿದು ಪ್ರಕರಣ?: ಮುಜಾಫರ್‌ನಗರದ ಖುಬ್ಬಾಪುರ ಗ್ರಾಮದ ನೇಹಾ ಪಬ್ಲಿಕ್‌ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಶಿಕ್ಷಕಿ ತೃಪ್ತಿ ತ್ಯಾಗಿ ಎಂಬುವರು ಮುಸ್ಲಿಂ ಹುಡುಗನಿಗೆ ಕಪಾಳಮೋಕ್ಷ ಮಾಡಿಸಿದ್ದರು. ಅಲ್ಲದೆ ಕೋಮುಪ್ರೇರಿತ ಹೇಳಿಕೆಗಳನ್ನು ಅವರು ನೀಡಿದ್ದರು. ಈ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿ, ವಿರೋಧಕ್ಕೂ ಕಾರಣವಾಗಿತ್ತು. ಅಲ್ಲದೆ, ಶಿಕ್ಷಕಿಯ ವಿರುದ್ಧ ಕೇಸ್‌ ಕೂಡ ದಾಖಲಾಗಿದೆ.

ಈ ಬಗ್ಗೆ ಸಮರ್ಥಿಸಿಕೊಂಡಿರುವ ಶಿಕ್ಷಕಿ, ನಾನು ಅಂಗವಿಕಲೆ ಆದ ಕಾರಣಕ್ಕೆ ಬೇರೆ ವಿದ್ಯಾರ್ಥಿಗಳಿಂದ ಈ ರೀತಿ ಮಾಡಿಸಿದೆ. ಆದರೆ, ರಾಜ್ಯದಲ್ಲಿ ಉದ್ವಿಗ್ನತೆ ಸೃಷ್ಟಿಸುವ ಕಾರಣಕ್ಕೆ ವಿಡಿಯೋ ತಿರುಚಲಾಗಿದೆ ಎಂದು ದೂರಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles