ಬೆಂಗಳೂರು : ಕಾಂಗ್ರೆಸ್ ನಲ್ಲಿ ಟಿಕೆಟ್ ಹಂಚಿಕೆಯಲ್ಲಿ ಗೊಂದಲವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ನಮ್ಮಲ್ಲಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಯಾವುದೇ ಗೊಂದಲ ಇಲ್ಲ, ಟಿಕೆಟ್ ವಿಚಾರವಾಗಿ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ, ಅರ್ಜಿ ಹಾಕಿದವ್ರಿಗೆ ಎಲ್ಲ ಟಿಕೆಟ್ ಸಿಗುತ್ತೆ ಎಂದಲ್ಲ, ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಎಲ್ಲರಿಗೂ ಸ್ಥಾನ ಮಾನ ನೀಡಲಾಗುತ್ತದೆ ಎಲ್ಲರೂ ಒಗ್ಗಟ್ಟಿನಿಂದ ಎಲೆಕ್ಷನ್ ಎದುರಿಸಿ ಈ ಬಾರಿ ಅಧಿಕಾರಕ್ಕೆ ಕಾಂಗ್ರೆಸ್ ಬರಲೇಬೇಕು ಎಂದರು.
ಎಐಸಿಸಿ ಕಾರ್ಯದರ್ಶೀ , ಕೆಪಿಸಿಸಿ ಕಾರ್ಯಾಧ್ಯಕ್ಷರು ಈಗಾಗಲೇ ವರದಿ ಕೊಟ್ಟಿದ್ದಾರೆ. ದೆಹಲಿ ನಾಯಕರು, ನಾವು ಪ್ರತ್ಯೇಕ ಸರ್ವೇ ಮಾಡಿಸಿದ್ದೇವೆ, ಎಲ್ಲವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಮಾಡಲಾಗುವುದು ಎಂದು ಹೇಳಿದರು.
ವಿಧಾನಸಭಾ ಎಲೆಕ್ಷನ್ ಗೆ ಕೆಲ ತಿಂಗಳಷ್ಟೇ ಬಾಕಿ ಇದ್ದು, ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ತಮ್ಮದೇ ಆದ ಸಿದ್ದತೆಯಲ್ಲಿ ತೊಡಗಿವೆ ಜೊತೆಗೆ ಅಭ್ಯರ್ಥಿಗಳ ಆಯ್ಕೆಗೆ ಸರ್ವೆ ಪ್ರಾರಂಭಿಸಿವೆ, ಟಿಕೆಟ್ ಹಂಚಿಕೆ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲಿ ಕಾಂಗ್ರೆಸ್ ಎಲೆಕ್ಷನ್ ಸಮಿತಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ.