ಬೆಂಗಳೂರು: ಕನ್ನಡದ ರಿಯಲ್ ಸ್ಟಾರ್ ಉಪೇಂದ್ರರವರ ಉತ್ತಮ ಪ್ರಜಾಕೀಯ ಪಕ್ಷದ ಬಗ್ಗೆ ಮಾಹಿತಿಯೊಂದನ್ನು ರಿಯಲ್ ಸ್ಟಾರ್ ಉಪೇಂದ್ರ ಹಂಚಿಕೊಂಡಿದ್ದಾರೆ.
ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಿಯಲ್ ಸ್ಟಾರ್ ಉಪೇಂದ್ರರವರಿಗೆ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ. ಈ ಕುರಿತು ಚುನಾವಣಾ ಆಯೋಗ ಆದೇಶ ಹೊರಡಿಸಿದ್ದು, ಚುನಾವಣಾ ಆಯೋಗದ ಆದೇಶವನ್ನು ನಟ ಹಾಗೂ ರಾಜಕಾರಣಿ ಉಪೇಂದ್ರ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ “ಆಟೋ ರಿಕ್ಷಾ ” ಚಿಹ್ನೆ ಲಭಿಸಿದೆ. ಎಲ್ಲರಿಗೂ ಶುಭಾಶಯಗಳು ಎಂದು ಉಪೇಂದ್ರ ಟ್ವೀಟ್ ಮೂಲಕ ಹೇಳಿದ್ದಾರೆ.ಇದುವರೆಗೂ ಉತ್ತಮ ಪ್ರಜಾಕಿಯ ಪಕ್ಷಕ್ಕೆ ಯಾವುದೇ ಅಧಿಕೃತವಾಗಿ ಈ ಪಕ್ಷಕ್ಕೆ ಚಿಹ್ನೆ ಇರಲಿಲ್ಲ. ಇದೀಗ ಕೇಂದ್ರ ಚುನಾವಣೆ ಆಯೋಗ ಪಕ್ಷಕ್ಕೆ ಅಧಿಕೃತವಾಗಿ ಚಿಹ್ನೆ ನೀಡಿದೆ.
ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮತ್ತೆ ಕಾರ್ಯೋನ್ಮುಖರಾಗಿರುವ ಅವರು, ವಿಧಾನಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಉತ್ತಮ ಪ್ರಜಾಕೀಯ ಪಕ್ಷದಿಂದ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ನಿಗದಿಪಡಿಸಿದೆ.