Thursday, June 8, 2023
spot_img
- Advertisement -spot_img

#BREAKING ರಾಜಕೀಯ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ

ಬೆಂಗಳೂರು: ನಾನು ಸ್ವ-ಇಚ್ಛೆಯಿಂದ ಚುನಾವಣಾ ರಾಜಕೀಯದಿಂದ ನಿವೃತ್ತನಾಗಲು ಬಯಸಿದ್ದೇನೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ಮಾಜಿ ಸಚಿವ ಈಶ್ವರಪ್ಪ ಪತ್ರ ಬರೆದಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ನನ್ನ ಹೆಸರನ್ನು ಯಾವುದೇ ಕ್ಷೇತ್ರಕ್ಕೆ ಪರಿಗಣಿಸಬಾರದಾಗಿ ವಿನಂತಿ ಮಾಡುತ್ತೇನೆ. ಕಳೆದ 40ಕ್ಕೂ ಹೆಚ್ಚು ವರ್ಷದ ರಾಜಕೀಯ ಜೀವನದಲ್ಲಿ ಬೂತ್ ಮಟ್ಟದಿಂದ ರಾಜ್ಯದ ಉಪ-ಮುಖ್ಯಮಂತ್ರಿಯವರಿಗೆ ಗೌರವದ ಸ್ಥಾನಮಾನಗಳನ್ನು ನೀಡಿದ ಪಕ್ಷದ ಹಿರಿಯರಿಗೆ ನನ್ನ ಅನಂತ ಧನ್ಯವಾದಗಳು ಎಂದು ತಿಳಿಸಿದ್ದಾರೆ.

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ಕ್ಷಣಗಣನೆ ನಡೆಯುತ್ತಿರುವಾಗಲೇ ಈಶ್ವರಪ್ಪ ಈ ನಿರ್ಧಾರ ಪ್ರಕಟಿಸಿದ್ದಾರೆ. ರಾಜ್ಯದಲ್ಲಿ 70 ವರ್ಷ ಮೇಲ್ಪಟ್ಟ ಎಲ್ಲ ರಾಜಕೀಯ ನಾಯಕರಿಗೂ ಕೂಡ ಟಿಕೆಟ್‌ ನೀಡುವುದಿಲ್ಲ ಎಂಬ ಸುಳಿವನ್ನು ಬಿಜೆಪಿ ಹೈಕಮಾಂಡ್‌ ಸೂಚನೆ ನೀಡಿತ್ತು.

ಈ ಹಿನ್ನೆಲೆಯಲ್ಲಿ ತಮಗೆ ಈ ಬಾರಿ ಶಿವಮೊಗ್ಗ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್‌ ಸಿಗುವುದಿಲ್ಲ ಎಂಬ ನಿರೀಕ್ಷೆಯಿಂದ ಬಿಜೆಪಿಯ ಟಿಕೆಟ್‌ ಘೋಷಣೆಗೂ ಮುನ್ನವೇ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ನಿವೃತ್ತಿಯನ್ನು ಘೋಷಣೆ ಮಾಡಿಕೊಂಡಿದ್ದಾರೆ.

Related Articles

- Advertisement -spot_img

Latest Articles