‘ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ, ಮುಳ್ಳಂದಿ ಮುಖದ ಕರ್ನಾಟಕದ ಕಾಮಿಡಿ ಪೀಸ್’

ಮೈಸೂರು : ಮಾಜಿ ಸಂಸದ ಪ್ರತಾಪ್ ಸಿಂಹ ಮತ್ತು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ನಡುವಿನ ವಾಕ್ಸಮರ ತಾರಕಕ್ಕೇರಿದ್ದು, ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪ್ರತಾಪ್ ಸಿಂಹ ಅತ್ಯಂತ ಕಟು ಮತ್ತು ಅವಾಚ್ಯ ಪದಗಳನ್ನು ಬಳಸಿ ತೀಕ್ಷ್ಣವಾಗಿ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ನಗರದಲ್ಲು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರದೀಪ್ ಈಶ್ವರ್ ಕತ್ತಲಲ್ಲಿ ಕಾಣಲ್ಲ, ಬೆಳಕಲ್ಲಿ ಹೊಳೆಯಲ್ಲ. ಮುಳ್ಳಂದಿ ಮುಖದ ಕರ್ನಾಟಕದ ಏಕೈಕ ಕಾಮಿಡಿ ಪೀಸ್ ಪ್ರದೀಪ್ ಈಶ್ವರ್. ಮುಳ್ಳು ಹಂದಿ ಮುಖದ ಕಾಮಿಡಿ ಪೀಸ್ ಹುಟ್ಟೋದು ನಿಮ್ಮ ಅಪ್ಪನಿಗೆ ಮಾತ್ರ. ನನ್ನ ತಂದೆ ವಯಸ್ಸಿನಲ್ಲಿದ್ದಾಗ ಚಿಕ್ಕಬಳ್ಳಾಪುರ ಕಡೆ ಬಂದಿದ್ದರೆ ನೀನು ಸುಂದರವಾಗಿಯೇ ಹುಟ್ಟುತ್ತಿದ್ದೆ. ಎಚ್ಚರಿಕೆ ಇರಬೇಕು ಮಗನೇ ನನ್ನ ಬಗ್ಗೆ ಮಾತಾಡುವಾಗ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಇನ್ನು ಮುಂದುವರೆದು ಮಾತನಾಡಿದ ಅವರು, ಪ್ರದೀಪ್ ಈಶ್ವರ್‌ಗೆ ಅವರದೇ ಭಾಷೆಯಲ್ಲಿ ಉತ್ತರ ನೀಡಬೇಕಾದ ಅನಿವಾರ್ಯತೆ ಬಂದಿದೆ. ಈ ರೀತಿ ಕಠಿಣ ಪದಗಳನ್ನು ಬಳಸಿದ್ದಕ್ಕಾಗಿ ಕರ್ನಾಟಕದ ಜನರ ಬಳಿ ಕ್ಷಮೆ ಕೇಳುತ್ತೇನೆ. ನನ್ನ ತಾಯಿ ಬಗ್ಗೆ ಪ್ರದೀಪ್ ಈಶ್ವರ್ ಅವಹೇಳನವಾಗಿ ಮಾತಾಡಿದ್ದಾನೆ. ಇನ್ನೊಂದು ಬಾರಿ ಎಚ್ಚರಿಕೆ ಇರಲಿ. ರಾಜಕೀಯವಾಗಿ, ಚಿಕ್ಕಬಳ್ಳಾಪುರದ ಗೌಡರ ಸಣ್ಣ ಮುನಿಸಿನ ಕಾರಣದಿಂದಾಗಿ ಪ್ರದೀಪ್ ಈಶ್ವರ್ ಗೆದ್ದಿದ್ದಾರೆ ಅಷ್ಟೇ ಎಂದು ಪ್ರದೀಪ್‌ ಈಶ್ವರ್ ಗೆಲುವಿನ ಬಗ್ಗೆಯೂ ಟೀಕೆ ಮಾಡಿದರು.

Leave a Reply

Your email address will not be published. Required fields are marked *