ಬೆಂಗಳೂರು: ಸರ್ಕಾರ ಕಾವೇರಿ ವಿಷಯದಲ್ಲಿ ಮೊದಲಿನಿಂದಲೂ ಎಡವುತ್ತ ಬಂದಿದೆ. ಈಗಾಗಲೇ ಸಿಡಬ್ಲುಎಂಎ ಆದೇಶದಂತೆ 10 ಸಾವಿರ ಕ್ಯೂಸೆಕ್ಸ್ ನಂತೆ ಸುಮಾರು 15 ಟಿಎಂಸಿ ನೀರು ಬಿಟ್ಟಿದೆ ಆದರೂ ಅದರ ವಿರುದ್ದ ಯಾವುದೆ ಕಾನೂನಾತ್ಮಕ ಕ್ರಮ ತೆಗೆದುಕೊಳ್ಳಲಿಲ್ಲ ಎಂದು ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಬೊಮ್ಮಾಯಿ, ಈಗ ಸಿಡಬ್ಲುಎಂಎ ಸೂಚನೆ ಮೇರೆಗೆ 5000 ಕ್ಯುಸೆಕ್ಸ್ ನೀರು ಬಿಡಲು ಪ್ರಾರಂಭ ಮಾಡಿದ ಮೇಲೆ ಡಿಸಿಎಂ ಅವರು ಕಾನೂನು ತಜ್ಞರ ಜೊತೆ ಚರ್ಚೆ ಮಾಡುವುದರಲ್ಲಿ ಯಾವ ಅರ್ಥ ಇದೆ.
ಇದನ್ನೂ ಓದಿ : ನಮ್ಮ ರೈತರಿಗೆ ನೀರು ಇಟ್ಟುಕೊಂಡೇ, ತಮಿಳುನಾಡಿಗೆ ಬಿಟ್ಟಿದ್ದೆವು: ಕಾರಜೋಳ
ಹಿಂದಿನ ಆದೇಶದ ವಿರುದ್ದ ಈಗಾಗಲೇ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಬೇಕಾಗಿತ್ತು, ಅದು ಕೂಡ ಮಾಡಿಲ್ಲ.
ಈಗ ನೀರು ಬಿಡುತ್ತಿರುವುದರಿಂದ ಕಾನೂನು ಹೋರಾಟಕ್ಕೆ ಅರ್ಥವಿಲ್ಲ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ತೀವ್ರವಾದಂತಹ ಮನವರಿಕೆ ಮಾಡುವ ಮೂಲಕ ಕಾನೂನು ಹೋರಾಟ ಮಾಡಬೇಕೆಂದು ಆಗ್ರಹ ಮಾಡುತ್ತೇನೆ. ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ಕುಡಿಯುವ ನೀರು ಹಾಗೂ ರೈತರ ಹಿತಾಸಕ್ತಿ ಕಾಪಾಡಲು ವಿಫಲವಾಗಿದೆ ಎಂದು ಬರೆದುಕೊಂಡಿದ್ದಾರೆ.
ಇದನ್ನೂ ಓದಿ : ಝೀರೋ ಬಿಲ್ ಜೊತೆಗೆ ಈಗ ಝೀರೋ ಕರೆಂಟ್ ಆಗಿದೆ : ನಳಿನ್ ಕುಮಾರ್ ಕಟೀಲ್
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.