ಬೆಂಗಳೂರು : ಇಹಲೋಕ ತ್ಯಜಿಸಿದ ಕಾಂಗ್ರೆಸ್ ಹಿರಿಯ ಶಾಸಕ ಹಾಗೂ ಮಾಜಿ ಸಚಿವ ಹೆಚ್.ವೈ.ಮೇಟಿಯವರ (HY Meti) ಅಂತ್ಯ ಸಂಸ್ಕಾರ ನಡೆಯಲಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಸಕಲ ಸರ್ಕಾರಿ ಗೌರವದೊಂದಿಗೆ ಅಂತಿಮ ನಮನ ಸಲ್ಲಿಸಲು ತಯಾರಿ ನಡೆಸಲಾಗಿದೆ.
ಹೆಚ್.ವೈ. ಮೇಟಿ ಅವರ ಅಂತ್ಯಕ್ರಿಯೆ ಲಿಂಗಾಯತ ಧಾರ್ಮಿಕ ವಿಧಿ ವಿಧಾನದ ಪ್ರಕಾರ ನಡೆಯಲಿದೆ.
ಅವರ ಸ್ವಗ್ರಾಮವಾದ ತಿಮ್ಮಾಪುರದಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. ಬೆಂಗಳೂರಿನಿಂದ ಬಾಗಲಕೋಟೆಗೆ ಬೆಳಗ್ಗೆ ಪಾರ್ಥಿವಶರೀರ ತಂದು ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಅವರ ಸ್ವಗ್ರಾಮ ತಿಮ್ಮಾಪುರಕ್ಕೆ ಪಾರ್ಥಿವ ಶರೀರ ಕೊಂಡೊಯ್ದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಲಿದ್ದಾರೆ.
ಇದನ್ನೂ ಓದಿ : HY Meti Death: ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ಶಾಸಕ ಹೆಚ್.ವೈ.ಮೇಟಿ ಇನ್ನಿಲ್ಲ
ಮೇಟಿಯವರ ರಾಜಕೀಯ ಹಾದಿ :-
ಹುಲ್ಲಪ್ಪ ಯಮನಪ್ಪ ಮೇಟಿ ಸರಳ ಸಜ್ಜನಿಕೆಯ ರಾಜಕಾರಣಿ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರು, 14 ನೇ ಕರ್ನಾಟಕ ವಿಧಾನಸಭೆಯ ಸದಸ್ಯರು ಮತ್ತು ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಚಿವರು . 2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಮೇಟಿಯವರು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾದರು, 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ, ಅವರು ಬಿಜೆಪಿಯ ವೀರಭದ್ರಯ್ಯ ಚರಂತಿಮಠ ವಿರುದ್ಧ 15,934 ಮತಗಳ ಅಂತರದಿಂದ ಸೋತರು. ಅದಕ್ಕೂ ಮೊದಲು, ಅವರು 1989 ರಿಂದ 1999 ರವರೆಗೆ ಮತ್ತು 2004 ರಿಂದ 2007 ರವರೆಗೆ ಗುಳೇದಗುಡ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.