Monday, December 11, 2023
spot_img
- Advertisement -spot_img

ವಿಪಕ್ಷದವ್ರು ಸಿಎಂ, ಡಿಸಿಎಂ ಭೇಟಿಯಾಗೋದು ಸಹಜ: ಅಶ್ವತ್ಥ್ ನಾರಾಯಣ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್​ ಅವರನ್ನು ವಿಪಕ್ಷದವರೂ ಭೇಟಿ ಮಾಡಲೇಬೇಕಾಗುತ್ತದೆ. ಇಂತಹ ಭೇಟಿಗಳಿಗೆ ಬೇರೆ ಬೇರೆ ಅರ್ಥ ಕೊಡುವ ಅಗತ್ಯವಿಲ್ಲ ಎಂದು ಮಾಜಿ ಸಚಿವ ಸಿ.ಎನ್‌.ಅಶ್ವತ್ಥ್‌ ನಾರಾಯಣ ಹೇಳಿದರು.

ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿದ್ದಾಗಲೇ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದವರು ಹಲವರಿದ್ದಾರೆ. ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯವಿದ್ದೇವೆ, ಗೆಳೆಯರಿದ್ದೇವೆ ಎಂದು ಸಮರ್ಥಿಸಿಕೊಂಡರು.

ಆದರೆ ಕಾಂಗ್ರೆಸ್​ಗೆ ಭವಿಷ್ಯ ಇಲ್ಲ. ಕಾಂಗ್ರೆಸ್​​ನವರೇ ಕೆಲವರಿಗೆ ಬ್ಲಾಕ್‌ಮೇಲ್ ಮಾಡುತ್ತಿದ್ದಾರೆ. ಅವರ ಬ್ಲಾಕ್‌ಮೇಲ್ ಫೇಲ್‌ ಆಗುತ್ತದೆ ಎಂದರು.

ಇದನ್ನೂ ಓದಿ: 1 ವರ್ಷ ಪೂರೈಸಿದ ಭಾರತ್ ಜೋಡೋ; ಪ್ರತಿ ಜಿಲ್ಲೆಯಲ್ಲೂ ಕಾಂಗ್ರೆಸ್ ಯಾತ್ರೆ!

ಉದಯನಿಧಿ ದುರಹಂಕಾರದ ಹೇಳಿಕೆ ನೀಡಿದ್ದಾರೆ: ಇನ್ನು ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್​ ಹೇಳಿಕೆ ವಿಚಾರವಾಗಿ ಮಾತನಾಡಿದ ಅಶ್ವತ್ಥ್‌ ನಾರಾಯಣ, ಉದಯನಿಧಿ ದುರಹಂಕಾರದ ಹೇಳಿಕೆ ನೀಡಿದ್ದಾರೆ. ಆ​ ಹೇಳಿಕೆ ಅಜ್ಞಾನದಿಂದ ಕೂಡಿದೆ. ಅವರನ್ನೂ ಕೂಡಲೇ ಪಕ್ಷದಿಂದ ಉಚ್ಚಾಟನೆ ಮಾಡಬೇಕು. ಉದಯನಿಧಿ​​ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles