ನಾನು & ನನ್ನ ಮಕ್ಕಳು ಚುನಾವಣೆಗೆ ಸ್ಪರ್ಧಿಸುವುದಿಲ್ಲ, ನಮ್ಮತ್ರ ಅಷ್ಟು ದುಡ್ಡಿಲ್ಲ : ಹೆಚ್.ವಿಶ್ವನಾಥ್

ಮೈಸೂರು : ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಹೆಚ್‌.ವಿಶ್ವನಾಥ್‌ ಘೋಷಣೆ ಮಾಡಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾನು ಈ ಹಿಂದೆ ಚುನಾವಣೆಗಳಲ್ಲಿ ಸ್ಪರ್ಧಿಸಿದಾಗ ಜನರೇ ಖರ್ಚಿಗೆ ಹಣ ನೀಡಿ ಆಶೀರ್ವದಿಸುತ್ತಿದ್ದರು.

ವಿಧಾನಸಭೆಗೆ ಸ್ಪರ್ಧಿಸಲು ಕನಿಷ್ಠ ₹50 ಕೋಟಿ ಬೇಕು..!

ಆದರೆ, ಈಗ ಪರಿಸ್ಥಿತಿ ಬದಲಾಗಿದೆ. ವಿಧಾನಸಭೆಗೆ ಸ್ಪರ್ಧಿಸಲು ಕನಿಷ್ಠ ₹50 ಕೋಟಿ ಬೇಕು. ರಿಯಲ್‌ ಎಸ್ಟೇಟ್‌ ವ್ಯವಹಾರದಲ್ಲಿ ತೊಡಗಿದವರು ತಮ್ಮ ಜಮೀನು, ಮನೆ ಮಾರಿ ಸ್ಪರ್ಧಿಸಬಹುದು. ಆದರೆ, ನಮ್ಮಿಂದ ಅದು ಸಾಧ್ಯವಿಲ್ಲ ಎಂದರು.ನನ್ನ ಬಳಿ ಒಂದು ಮನೆ, ಒಂದು ನಿವೇಶನ ಮಾತ್ರ ಇದೆನನ್ನ ಬಳಿ ಒಂದು ಮನೆ ಮತ್ತು ಒಂದು ನಿವೇಶನ ಮಾತ್ರ ಇದೆ. ಹೀಗಿರುವಾಗ ಸ್ಪರ್ಧೆ ಹೇಗೆ ಸಾಧ್ಯ?. ಅಲ್ಲದೇ, ನನ್ನ ಮಕ್ಕಳು ಕೂಡ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಅವರು ತಮ್ಮ ಶಕ್ತ್ಯಾನುಸಾರ ರಾಜಕೀಯದಲ್ಲಿ ಮುಂದುವರಿಯುತ್ತಾರೆ. ನಾನು ರಾಜಕೀಯ ಚಟುವಟಿಕೆಯಲ್ಲಿ ಸಕ್ರಿಯವಾಗಿರುತ್ತೇನೆ. ಆದರೆ, ಚುನಾವಣೆಗೆ ಮಾತ್ರ ಸ್ಪರ್ಧಿಸುವುದಿಲ್ಲ ಎಂದರು.

Leave a Reply

Your email address will not be published. Required fields are marked *