ನವದೆಹಲಿ: ಆಗಸ್ಟ್ನಲ್ಲಿ ನೂಹ್ನಲ್ಲಿ ನಡೆದ ಕೋಮು ಹಿಂಸಾಚಾರದ ಆರೋಪಿಯಾಗಿರುವ ಹರಿಯಾಣ ಕಾಂಗ್ರೆಸ್ ಶಾಸಕ ಮಮ್ಮನ್ ಖಾನ್ ಅವರನ್ನು ಗುರುವಾರ ಬಂಧಿಸಲಾಗಿದೆ.
ಹರಿಯಾಣ ಪೊಲೀಸರ ಪ್ರಕಾರ, ವಿಶ್ವ ಹಿಂದೂ ಪರಿಷತ್ (ವಿಎಚ್ಪಿ) ಯಾತ್ರೆಯ ನಂತರ ಸಂಭವಿಸಿದ ಹಿಂಸಾಚಾರದಲ್ಲಿ ಮಮ್ಮನ್ ಖಾನ್ ಭಾಗಿಯಾಗಿದ್ದಕ್ಕೆ “ಸಾಕಷ್ಟು ಪುರಾವೆಗಳು” ಇವೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : MLAs salaries : ಶಾಸಕರಿಗೆ ಅತೀ ಹೆಚ್ಚು ಸಂಬಳ ನೀಡುವ ರಾಜ್ಯ ಜಾರ್ಖಂಡ್ : ಕರ್ನಾಟದಲ್ಲಿ ಎಷ್ಟಿದೆ ಗೊತ್ತಾ?
ಫಿರೋಜ್ಪುರದ ಶಾಸಕ ಜಿರ್ಕಾ ಮಂಗಳವಾರ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ನಲ್ಲಿ ಬಂಧನದಿಂದ ರಕ್ಷಣೆ ಕೋರಿ ಅರ್ಜಿ ಸಲ್ಲಿಸಿದ್ದು, ವಿಚಾರಣೆಯನ್ನು ಅಕ್ಟೋಬರ್ 19ಕ್ಕೆ ನಿಗದಿಪಡಿಸಲಾಗಿತ್ತು.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಮಮ್ಮನ್, ಹಿಂಸಾಚಾರ ಭುಗಿಲೆದ್ದ ದಿನದಂದು ನಾನು ನೂಹ್ನಲ್ಲಿ ಇರಲಿಲ್ಲವಾದ್ದರಿಂದ ತನ್ನನ್ನು ಈ ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗುತ್ತಿದೆ ಎಂದು ಹೇಳಿದ್ದಾರೆ.
“ಸಾಕ್ಷಾಧಾರಗಳ ಸರಿಯಾದ ಪರಿಶೀಲನೆಯ” ನಂತರ ಕಾಂಗ್ರೆಸ್ ನಾಯಕನನ್ನು ಆರೋಪಿ ಎಂದು ಹೆಸರಿಸಲಾಗಿದೆ ಎಂದು ಹರಿಯಾಣ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು. ಪೊಲೀಸರು ತಮ್ಮ ಪ್ರಕರಣವನ್ನು ಬೆಂಬಲಿಸಲು ಫೋನ್ ಕರೆ ದಾಖಲೆಗಳು ಮತ್ತು ಇತರ ಸಾಕ್ಷ್ಯಗಳನ್ನು ಹೊಂದಿದ್ದೇವೆ ಎಂದು ಹೇಳಿದ್ದಾರೆ.
ಮಮ್ಮನನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು.
ಇದಕ್ಕೂ ಮೊದಲು, ತನಿಖಾ ತಂಡದ ಮುಂದೆ ಹಾಜರಾಗುವಂತೆ ನೂಹ್ ಪೊಲೀಸರು ಶಾಸಕರಿಗೆ ಎರಡು ಬಾರಿ ಸಮನ್ಸ್ ನೀಡಿದ್ದರು. ಆದರೆ, ಪೊಲೀಸರ ಸಮನ್ಸ್ಗೆ ಮಣಿಯದೆ, ವೈರಲ್ ಫೀವರ್ ಇದೆ ಎಂದು ಕಾರಣ ನೀಡಿದ್ದಾರೆ.
ಶಾಸಕರ ವಕೀಲರ ಪ್ರಕಾರ, ಎಫ್ಐಆರ್ನಲ್ಲಿ ತನ್ನ ಹೆಸರನ್ನು ಆರೋಪಿಯನ್ನಾಗಿ ಸೇರಿಸಿರುವ ಬಗ್ಗೆ ಖಾನ್ ಗೆ ಗೊತ್ತಾಗಿರುವುದು ಗುರುವಾರ ಎಂಬುವುದು ಆಶ್ಚರ್ಯ ಸಂಗತಿಯಾಗಿದೆ.
ಇದನ್ನೂ ಓದಿ : ದೆಹಲಿ ಅಬಕಾರಿ ನೀತಿ ಹಗರಣ; ED ನೋಟಿಸ್ ಅಲ್ಲ ಮೋದಿ ನೋಟಿಸ್ ಸ್ವೀಕರಿಸಿದ್ದೇನೆ: ಕವಿತಾ
ಹೈಕೋರ್ಟಿಗೆ ಸಲ್ಲಿಸಿದ ಅರ್ಜಿಯಲ್ಲಿ ಖಾನ್ ಹರಿಯಾಣ ಸರ್ಕಾರಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಜನರಲ್ ಶ್ರೇಣಿಗಿಂತ ಕಡಿಮೆಯಿಲ್ಲದ ಅಧಿಕಾರಿಗಳನ್ನು ಒಳಗೊಂಡ ಉನ್ನತ ಮಟ್ಟದ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸುವಂತೆ ನಿರ್ದೇಶನಗಳನ್ನು ಕೋರಿದ್ದರು. ಹಿಂಸಾಚಾರಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎಸ್ಐಟಿಗೆ ವರ್ಗಾಯಿಸಿ, ‘ಎಸ್ಐಟಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಮುಂದಿನ ನಿರ್ದೇಶನ’ ಎಂದು ವಿನಂತಿಸಿದರು.
ಜುಲೈ 31 ರಂದು, ನುಹ್ನಲ್ಲಿ ವಿಎಚ್ಪಿ ನೇತೃತ್ವದ ಮೆರವಣಿಗೆಯ ಮೇಲೆ ಜನಸಮೂಹ ದಾಳಿ ನಡೆಸಿತು, ಇದು ಮಾರಣಾಂತಿಕ ಘರ್ಷಣೆಗೆ ಕಾರಣವಾಯಿತು. ಈ ಘಟನೆಯಲ್ಲಿ ಆರು ಜನ ಸಾವನ್ನಪ್ಪಿದ್ದಾರೆ ಮತ್ತು ಅನೇಕರು ಗಾಯಗೊಂಡರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.