ಬೆಂಗಳೂರಲ್ಲಿ ನಡೆದ ಕಾಲ್ತುಳಿಕ್ಕೆ ಸರ್ಕಾರವೇ ಹೊಣೆ: ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರಲ್ಲಿ ಬುಧವಾರ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸರ್ಕಾರವೇ ಹೊಣೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಪುನರುಚ್ಛರಿಸಿದರು. ಆರ್​ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸ್ತಾ ಇದ್ದೇವೆ, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರಬೇಕೆಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.

ಉಪ ಮುಖ್ಯಮಂತ್ರಿ ಕನಕಪುರದಲ್ಲಿ ಹೇಳಿಕೆ ನೀಡಿದ್ದಾರೆ, ಈ ಹಿನ್ನೆಲೆಯಲ್ಲಿ ಅಭಿಮಾನಿಗಳ ಭದ್ರತೆಗೆ ಸೂಕ್ತ ವ್ಯವಸ್ಥೆ ಮಾಡೋದು ಸರ್ಕಾರದ ಜವಾಬ್ದಾರಿಯಾಗಿತ್ತು ಎಂದು ಕುಮಾರಸ್ವಾಮಿ ಹೇಳಿದರು. ಅಸಲಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ನಡುವೆ ಪ್ರತಿಷ್ಠೆಯ ಕಾಳಗ ನಡೆಯುತ್ತಿದೆ, ಅವರ ವರ್ಚಸ್ಸಿನ ಕಿತ್ತಾಟಕ್ಕೆ ಅಮಾಯಕ ಕುಟುಂಬಗಳ ಮಕ್ಕಳು ಬಲಿಯಾದರು ಎಂದು ಕುಮಾರಸ್ವಾಮಿ ಹೇಳಿದರು

Leave a Reply

Your email address will not be published. Required fields are marked *