ಸಿಎಂ ಬದಲಾವಣೆ ಇಲ್ಲ, ಹೈಕಮಾಂಡ್‌ ಕ್ಲಿಯರ್‌ ಆಗಿ ಹೇಳಿದೆ ಎಂದ ಯತೀಂದ್ರ ಸಿದ್ದರಾಮಯ್ಯ

ಬೆಳಗಾವಿ : ಸಿದ್ದರಾಮಯ್ಯರೇ ಪೂರ್ಣಾವಧಿಯ ಸಿಎಂ ಆಗಿರ್ತಾರೆ ಎನ್ನುವ ಮೂಲಕ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆ ಹುಟ್ಟುಹಾಕಿದ್ದ ಯತೀಂದ್ರ ಸಿದ್ದರಾಮಯ್ಯ ಮತ್ತೆ ಸ್ಪೋಟಕ ಹೇಳಿಕೆಯೊಂದನ್ನ ನೀಡಿದ್ದಾರೆ.

ಈ ಕುರಿತು ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಬಾಂಬ್‌ ಸಿಡಿಸಿದ್ದಾರೆ. ನನ್ನ ತಂದೆಯೇ 5 ವರ್ಷ ಮುಖ್ಯಮಂತ್ರಿ ಆಗಿರುತ್ತಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಕುರ್ಚಿ ಕಿತ್ತಾಟದ ಬಗ್ಗೆ ಯಾರೂ ಬಹಿರಂಗ ಹೇಳಿಕೆ ನೀಡದಂತೆ ಸಿಎಂ ಸೂಚಿಸಿದ್ದರೂ ಪುತ್ರ ಮತ್ತೆ ಈ ವಿಚಾರವನ್ನು ಕೆದಕಿ ಉರಿಯುವ ಬೆಂಕಿಗೆ ತುಪ್ಪ ಸುರಿದಿದ್ದಾರೆ ಎನ್ನಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಮಧ್ಯೆ ಎರಡು ಬ್ರೇಕ್‌ಫಾಸ್ಟ್‌ ಮೀಟಿಂಗ್‌ ನಡೆದಿತ್ತು. ಡಿಕೆಶಿ ಮನೆಗೆ ಆಗಮಿಸಿ ಪ್ರತಿಕ್ರಿಯಿಸಿದ್ದ ಸಿಎಂ ಹೈಕಮಾಂಡ್‌ ಹೇಳುವವರೆಗೆ ನಾನೇ ಸಿಎಂ ಆಗಿರುತ್ತೇನೆ ಎಂದು ತಿಳಿಸಿದ ನಂತರ ಈ ವಿಚಾರ ಸ್ವಲ್ಪ ತಣ್ಣಗಾಗಿತ್ತು. ಆದರೆ ಪುತ್ರ ಮತ್ತೆ ತಂದೆಯ ಪರ ಬ್ಯಾಟ್‌ ಬೀಸಿ ಚರ್ಚೆಗೆ ಗ್ರಾಸವಾಗಿದ್ದಾರೆ.

Leave a Reply

Your email address will not be published. Required fields are marked *