Monday, December 11, 2023
spot_img
- Advertisement -spot_img

‘ಸಚಿವ ಸುಧಾಕರ್ ಪ್ರಕರಣದಲ್ಲಿ ನಾನು ಮಧ್ಯೆ ಪ್ರವೇಶಿಸುವುದಿಲ್ಲ’

ಬೆಂಗಳೂರು : ಸಚಿವ ಡಿ. ಸುಧಾಕರ್ ವಿರುದ್ಧದ ದಲಿತ ದೌರ್ಜನ್ಯ ಪ್ರಕರಣ ನನಗೆ ಗೊತ್ತಾದ ಮೇಲೆ ವರದಿ ಕೇಳಿದ್ದೇನೆ. ಅದರಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ, ಯಾವುದೇ ನಿರ್ದೇಶನಗಳನ್ನೂ ಕೊಡುವುದಿಲ್ಲ. ವಿಷಯ ಏನು ಎಂದು ಕೇಳಿಕೊಂಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಸುಧಾಕರ್ ಬಂದು ನನ್ನ ಭೇಟಿ ಮಾಡಿದ್ದಾರೆ. 10 ವರ್ಷದ ಹಿಂದೆ ಪ್ರಾಪರ್ಟಿ ಕೊಂಡುಕೊಂಡಿದ್ದೇನೆ. ಯಾರಿಗೂ ಅವಹೇಳನ ಮಾಡಿಲ್ಲ, ಗೂಂಡಾಗಿರಿ ಮಾಡಿಲ್ಲ ಅಂದಿದ್ದಾರೆ. ನಮ್ಮ ಇಲಾಖೆಯವರಿಗೆ ಸತ್ಯಾಂಶ ಏನು ಎಂಬುವುದನ್ನು ಕೇಳಿದ್ದೇನೆ. ನಮಗೆ ವರದಿ ಬಂದ ಮೇಲೆ ಮುಖ್ಯಮಂತ್ರಿಗಳಿಗೂ ಬ್ರೀಫ್ ಮಾಡುತ್ತೇವೆ ಎಂದು ತಿಳಿಸಿದರು.

ಬಿಕೆ ಹರಿಪ್ರಸಾದ್ ಗೆ ಎಐಸಿಸಿ ಶಿಸ್ತು ಸಮಿತಿಯಿಂದ ನೋಟಿಸ್ ಜಾರಿ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವರು, ಇದು ಎಐಸಿಸಿ ಹಂತಕ್ಕೆ ತಲುಪಿದೆ. ಈ ವಿಚಾರದಲ್ಲಿ ಎಐಸಿಸಿ ತನ್ನ ಗಮನ ಹರಿಸಲಿದೆ. ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತಾರೆ ಎಂಬುವುದು ನನಗೆ ಗೊತ್ತಿಲ್ಲ. ಎಐಸಿಸಿಯಿಂದ ಅವರಿಗೆ ನೋಟಿಸ್ ನೀಡಿದ್ದಾರೆ, ಅವರು ನೋಟಿಸ್‌ನಲ್ಲಿ ಏನು ಕೇಳಿದ್ದಾರೆ ಗೊತ್ತಿಲ್ಲ ಎಂದು ಪರಮೇಶ್ವರ್ ಹೇಳಿದ್ದಾರೆ.

ಇದನ್ನೂ ಓದಿ : ಪೊಲೀಸರು ವಶಕ್ಕೆ ಪಡೆಯುವ ವೇಳೆ ಆತ್ಮಹತ್ಯೆಗೆ ಯತ್ನಿಸಿದ ಚೈತ್ರಾ ಕುಂದಾಪುರ!

ಏನಿದು ಸಚಿವರ ಮೇಲಿನ ಪ್ರಕರಣ..?

ಸಿದ್ದರಾಮಯ್ಯ ಸಂಪುಟದ ಯೋಜನೆ ಹಾಗೂ ಸಾಂಖಿಕ ಇಲಾಖೆ ಸಚಿವ ಡಿ.ಸುಧಾಕರ್ ವಿರುದ್ಧ ದಲಿತರ ಮೇಲಿನ ದೌರ್ಜನ್ಯ, ವಂಚನೆ, ಹಲ್ಲೆ ಮತ್ತು ಜಾತಿ ನಿಂದನೆ ಆರೋಪದಡಿ ಎಫ್ಐಆರ್ ದಾಖಲಾಗಿದೆ. ಹಿರಿಯೂರು ಶಾಸಕ ಹಾಗೂ ಯೋಜನೆ ಮತ್ತು ಸಾಂಖ್ಯಿಕ ಖಾತೆ ಸಚಿವ ಡಿ.ಸುಧಾಕರ್ ಸೇರಿದಂತೆ ಮೂವರ ವಿರುದ್ಧ ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಯಲಹಂಕದ ಸುಬ್ಬಮ್ಮ ಎಂಬುವರು ನೀಡಿದ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಾಗಿದೆ. ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಪಾಲುದಾರರಾಗಿರುವ ಸುಧಾಕರ್, ಮೋಸದಿಂದ ದಲಿತರ ಆಸ್ತಿ ಕಬಳಿಕೆ ಮಾಡಿದ್ದು, ತನ್ನ ಮಗಳ ಮೇಲೂ ಹಲ್ಲೆ ಮಾಡಿದ್ದಾರೆಂದು ಸುಬ್ಬಮ್ಮ ಆರೋಪಿಸಿದ್ದಾರೆ. ಆದ್ದರಿಂದ, ಸಚಿವ ಡಿ.ಸುಧಾಕರ್, ಶ್ರೀನಿವಾಸ್, ಭಾಗ್ಯಮ್ಮ ಎಂಬುವವರ ವಿರುದ್ಧ ಎಫ್ಐಆರ್ ಹಾಕಲಾಗಿದೆ.

ಯಲಹಂಕ ಗ್ರಾಮದ ಸರ್ವೆ ನಂಬರ್ 108/1ರ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದು, ಕೋರ್ಟ್ನಲ್ಲಿ ಕೇಸ್ ನಡೆಯುತ್ತಿರುವಾಗಲೇ ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ನಡೆಸಿದ್ದಾರೆ. ಮಹಿಳೆಯರನ್ನು ಕರೆದೊಯ್ದು ಜೆಸಿಬಿ ಮೂಲಕ ಮನೆ ಕೆಡವಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಇದನ್ನೂ ಓದಿ : ಎಲ್ಲದಕ್ಕೂ ರಾಜೀನಾಮೆಯೇ ಪರಿಹಾರವಲ್ಲ : ಸತೀಶ್ ಜಾರಕಿಹೊಳಿ

ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ನವರು 1.30 ಎಕರೆ ಜಮೀನನ್ನು ಮೋಸದಿಂದ ಕಬಳಿಕೆ ಮಾಡಿದ್ದಾರೆ. ಈ ಪ್ರಕರಣ ನ್ಯಾಯಾಲಯದಲ್ಲಿ ಇರುವಾಗ ಗುಂಪು ಕಟ್ಟಿಕೊಂಡು ಬಂದು ದೌರ್ಜನ್ಯ ಎಸೆಗಿದ್ದಾರೆ. ಮಹಿಳೆಯರನ್ನು ಕರೆದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ ಎನ್ನಲಾಗಿದೆ.

ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್‌ಗೆ ಸೇರಿದ ಆಸ್ತಿಗೆ ಅತಿಕ್ರಮ ಪ್ರವೇಶ ಮಾಡಿದ ಆರೋಪದಡಿ ಯಲಹಂಕ ಪೊಲೀಸ್ ಠಾಣೆಯಲ್ಲಿ 11 ಮಂದಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಚಿವ ಡಿ.ಸುಧಾಕರ್ ಪುತ್ರ, ಸೆವೆನ್ ಹಿಲ್ಸ್ ಡೆವಲಪರ್ಸ್ ಮತ್ತು ಟ್ರೇಡರ್ಸ್ ಕಂಪನಿಯ ನಿರ್ದೇಶಕ ಸುಹಾಸ್ ಸುಧಾಕರ್ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles