ನವದೆಹಲಿ: ಒಕ್ಕೂಟಕ್ಕೆ I.N.D.I.A ಎಂಬ ಹೆಸರಿಟ್ಟಿದ್ದಕ್ಕೆ ಭಯಬಿದ್ದಿದ್ದಾರೆ. ನಾವೇನಾದರೂ ನಮ್ಮ ಒಕ್ಕೂಟಕ್ಕೆ ‘ಭಾರತ್’ ಎಂದು ಹೆಸರಿಟ್ಟರೆ ಅವರು ದೇಶಕ್ಕೆ ‘ಬಿಜೆಪಿ’ ಎಂದು ಕರೆಯುತ್ತಾರೆಯೇ? ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪ್ರಶ್ನಿಸಿದ್ದಾರೆ.
ಜಿ-20 ಶೃಂಗಸಭೆಯ ಹಿನ್ನೆಲೆ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾಗಿರುವ ಔತಣಕೂಟದ ಆಹ್ವಾನ ಪತ್ರಿಕೆಯಲ್ಲಿ ಸಾಂಪ್ರದಾಯಿಕವಾಗಿ ಬರೆಯಲಾಗುವ ‘ಪ್ರೆಸಿಡೆಂಟ್ ಆಫ್ ಇಂಡಿಯಾ’ ಬದಲು ‘ಪ್ರೆಸಿಡೆಂಟ್ ಆಫ್ ಭಾರತ್’ ಎಂದು ಉಲ್ಲೇಖಿಸಿರುವುದಕ್ಕೆ ಭಾರೀ ಟೀಕೆಗಳೂ ವ್ಯಕ್ತವಾಗುತ್ತಿದೆ. ಈ ಕುರಿತು ನಗರದಲ್ಲಿ ಪ್ರತಿಕ್ರಿಯಿಸಿರುವ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ: ದೇಶದ ಹೆಸರು ಬದಲಾಯಿಸುವ ಹಕ್ಕು ಯಾರಿಗೂ ಇಲ್ಲ: ಶರದ್ ಪವಾರ್
ಹೆಸರು ಬದಲಾವಣೆ ಮಾಡುತ್ತಿರುವ ಬಗ್ಗೆ ನನಗೆ ಯಾವುದೇ ಅಧಿಕೃತ ಮಾಹಿತಿ ಇಲ್ಲ. ಹಲವು ವಿರೋಧ ಪಕ್ಷಗಳು ಮೈತ್ರಿ ಮಾಡಿಕೊಂಡು INDIA ಎಂದು ಕರೆದ ಕಾರಣಕ್ಕೆ ಭಾರತ್ ಎಂದು ಕೇಂದ್ರ ಹೆಸರು ಬದಲಾಯಿಸುತ್ತದೆಯೇ? ದೇಶವು 140 ಕೋಟಿ ಜನರಿಗೆ ಸೇರಿದ್ದು, ಒಂದು ಪಕ್ಷಕ್ಕಲ್ಲ, ಮೈತ್ರಿಯ ಹೆಸರನ್ನು ‘ಭಾರತ್’ ಎಂದು ಬದಲಾಯಿಸಿದರೆ, ಅವರು ‘ಭಾರತ್’ ಹೆಸರನ್ನು ‘ಬಿಜೆಪಿ’ ಎಂದು ಬದಲಾಯಿಸುತ್ತಾರೆಯೇ? ಎಂದಿದ್ದಾರೆ.
ಇದನ್ನೂ ಓದಿ: ‘ಭಾರತವನ್ನು ಬದಲಿಸುತ್ತೇನೆ ಎಂದ ಬಿಜೆಪಿ ಬದಲಿಸಿದ್ದು ಹೆಸರು ಮಾತ್ರ’
ಆಪ್ ನಾಯಕ ರಾಘವ್ ಚಡ್ಡಾ ಈ ಕುರಿತಂತೆ ಎಕ್ಸ್ನಲ್ಲಿ (ಟ್ವಿಟರ್) ಪ್ರತಿಕ್ರಿಯಿಸಿ, ‘ ಬಿಜೆಪಿ ದೇಶದ ಹೆಸರನ್ನು ಹೇಗೆ ಬದಲಿಸುತ್ತದೆ? ದೇಶ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ, 135 ಕೋಟಿ ಜನರಿಗೆ ಸೇರಿದ್ದು, ನಮ್ಮ ರಾಷ್ಟ್ರೀಯ ಗುರುತು, ಬಿಜೆಪಿಯ ವೈಯಕ್ತಿಕ ಆಸ್ತಿಯಲ್ಲ ಎಂದಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.