ನವದೆಹಲಿ: ಭಾರತವು ಹಿಂದೂ ರಾಷ್ಟ್ರವಲ್ಲ, ಮತ್ತು ಅದು ಎಂದಿಗೂ ಆಗಿರಲೂ ಇಲ್ಲ. ಭಾರತವು ಅಂತರ್ಗತವಾಗಿ ಬಹುತ್ವದ ರಾಷ್ಟ್ರವಾಗಿದೆ ಎಂದು ಎಸ್ಪಿ (ಸಮಾಜ್ವಾದಿ ಪಾರ್ಟಿ) ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಹೇಳಿದ್ದಾರೆ. ಆರ್ಎಸ್ಎಸ್ ಮುಖಂಡ ಮೋಹನ್ ಭಾಗವತ್ ಅವರ ಹಿಂದೂ ರಾಷ್ಟ್ರ ಹೇಳಿಕೆ ಸಂಬಂಧ ಪ್ರತಿಕ್ರಿಯಿಸಿರುವ ಅವರು, ನಮ್ಮದು ಜಾತ್ಯಾತೀತ ಕಲ್ಪನೆಯಾಗಿದೆ. ಹಿಂದೂ ರಾಷ್ಟ್ರವಲ್ಲ ಎಂದಿದ್ದಾರೆ.
‘ನಮ್ಮ ಸಂವಿಧಾನವು ಜಾತ್ಯತೀತ ರಾಜ್ಯದ ಕಲ್ಪನೆಯನ್ನು ಆಧರಿಸಿದೆ. ಭಾರತದಲ್ಲಿರುವ ಎಲ್ಲಾ ಜನರು ಭಾರತೀಯರು. ನಮ್ಮ ಭಾರತೀಯ ಸಂವಿಧಾನವು ಎಲ್ಲಾ ಧರ್ಮಗಳು, ನಂಬಿಕೆಗಳು, ಪಂಗಡಗಳು ಮತ್ತು ಸಂಸ್ಕೃತಿಗಳನ್ನೂ ಪ್ರತಿನಿಧಿಸುತ್ತದೆ’ ಎಂದು ಎಕ್ಸ್ನಲ್ಲಿ(ಟ್ವಿಟರ್) ಬರೆದುಕೊಂಡಿದ್ದಾರೆ.
ಇದನ್ನೂ ಓದಿ: ‘ನಮಗೆ ಬೇಕಿರುವುದು ಒಂದು ರಾಷ್ಟ್ರ ಒಂದು ಶಿಕ್ಷಣ ನೀತಿ’
ನಾಗ್ಪುರದಲ್ಲಿ ‘ಮಧುಕರ್ ಭವನ’ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಮೋಹನ್ ಭಾಗವತ್, ‘ಭಾರತವು ‘ಹಿಂದೂ ರಾಷ್ಟ್ರ’ ಮತ್ತು ಎಲ್ಲಾ ಭಾರತೀಯರು ಹಿಂದೂಗಳು ಮತ್ತು ಹಿಂದೂಗಳು ಎಲ್ಲಾ ಭಾರತೀಯರನ್ನು ಪ್ರತಿನಿಧಿಸುತ್ತಾರೆ’ ಎಂದಿದ್ದರು.
‘ಕೆಲವರು ಇದನ್ನು ಅರ್ಥಮಾಡಿಕೊಂಡಿದ್ದಾರೆ, ಆದರೆ ಕೆಲವರು ತಮ್ಮ ಅಭ್ಯಾಸಗಳು ಮತ್ತು ಸ್ವಾರ್ಥದಿಂದಾಗಿ ಅರ್ಥಮಾಡಿಕೊಂಡ ನಂತರವೂ ಅದನ್ನು ಕಾರ್ಯಗತಗೊಳಿಸುತ್ತಿಲ್ಲ. ಅಲ್ಲದೆ, ಕೆಲವರು ಇದನ್ನು ಇನ್ನೂ ಅರ್ಥಮಾಡಿಕೊಂಡಿಲ್ಲ’ ಎಂದಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.