Wednesday, May 31, 2023
spot_img
- Advertisement -spot_img

ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ : ಪೊಲೀಸ್ ಇಲಾಖೆಯಿಂದ ಭದ್ರತೆ

ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ 2023ಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಶಾಂತಿಯುತ ಮತದಾನಕ್ಕೆ ಸಕಲ ಸಿದ್ದತೆ ಕೈಗೊಳ್ಳಲಾಗುತ್ತಿದೆ. ನಾಳೆ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಈ ಬಾರಿಯ ಚುನಾವಣೆಗೆ ರಾಜ್ಯದಾದ್ಯಂತ 2.2 ಲಕ್ಷ ಪೊಲೀಸರನ್ನು ಚುನಾವಣಾ ಭದ್ರತೆಗೆ ನಿಯೋಜಿಸಲಾಗಿದೆ.

ವಿಧಾನಸಭೆ ಚುನಾವಣೆ ಮತದಾನಕ್ಕೆ 55,282 ಮತಗಟ್ಟೆಗಳನ್ನು ತೆರೆಯಲಾಗಿದ್ದು, ಅದರಲ್ಲಿ 11,617 ಸೂಕ್ಷ್ಮ ಮತಗಟ್ಟೆಗಳೆಂದು ಗುರುತಿಸಿ ಅವುಗಳಿಗೆ ಪೊಲೀಸ್ ಸಿಬ್ಬಂದಿಯ ಜತೆಗೆ ಹೆಚ್ಚುವರಿಯಾಗಿ ಸಿಎಪಿಎಫ್​ ಕಂಪನಿಗಳನ್ನು ನಿಯೋಜಿಸಲಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಯ ಜಿದ್ದಾಜಿದ್ದಿನ ಅಖಾಡದಲ್ಲಿ ಕಳೆದ 15 ದಿನಗಳಿಂದ ಸಾಗಿದ ಬಿರುಸಿನ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ಕಣದಲ್ಲಿರುವ ಅಭ್ಯರ್ಥಿಗಳಿಂದ ಇಂದು ಮನೆ ಮನೆ ಪ್ರಚಾರ ನಡೆಯಲಿದ್ದು, ಅತ್ತ ಚುಣಾವಣಾ ಅಧಿಕಾರಿಗಳು ಸಹ ವೋಟಿಂಗ್​​ಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ.

ಮತದಾನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಇಲಾಖೆಯೂ ಸಹ ಕಟ್ಟೆಚ್ಚರ ವಹಿಸಿದ್ದು, ರಾಜ್ಯಾದ್ಯಂತ ಮತದಾನಕ್ಕೆ ಒಟ್ಟು 1.56 ಲಕ್ಷ ಪೊಲೀಸರು ಬಿಗಿ ಭದ್ರತೆಗೆ ನಿಯೋಜಿತರಾಗಿದ್ದಾರೆ.

Related Articles

- Advertisement -

Latest Articles