ಮಂಗಳೂರು: ಚುನಾವಣೆ ಮೊದಲು ಕಾಂಗ್ರೆಸ್ ಘೋಷಣೆ ಮಾಡಿದ ಗ್ಯಾರಂಟಿಗೆ ಮಾನದಂಡ ಇರಲಿಲ್ಲ. ಇವತ್ತು ಘೋಷಿಸಿದ ನಾಲ್ಕು ಗ್ಯಾರಂಟಿ ಗಳಿಗೆ ಮಾನದಂಡ ಹಾಕಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಈ ಬಗ್ಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗೃಹ ಜ್ಯೋತಿ ಹೆಸರಲ್ಲಿ ಇಡೀ ರಾಜ್ಯವನ್ನು ಕತ್ತಲಿನಲ್ಲಿ ಇಡಲಾಗಿದೆ. ರಾಜ್ಯದಲ್ಲಿ ಝೀರೋ ಬಿಲ್ ಜೊತೆಗೆ ಈಗ ಝೀರೋ ಕರೆಂಟ್ ಆಗಿದೆ. ಇಲ್ಲದಿರೋ ಮಾನದಂಡಗಳನ್ನು ತಂದು ಜನರಿಗೆ ಸಮಸ್ಯೆ ಆಗ್ತಿದೆ. ಇಂದಿರಾಗಾಂಧಿಯವರ ಗತವೈಭವದಲ್ಲಿ ಎಮರ್ಜೆನ್ಸಿ ತರಲಾಗಿತ್ತು. ಈಗ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ, ಸಾಮಾಜಿಕ ತಾಣದವರ ಮೇಲೂ ಕೇಸು ಹಾಕಲಾಗುತ್ತಿದೆ ಎಂದರು.
ಇದನ್ನೂ ಓದಿ : ಶಿವಮೊಗ್ಗದಿಂದ ವಿಮಾನ ಹಾರಾಟ ಶುರು : ಭೂಮಿ ಕೊಟ್ಟ ರೈತರಿಗೆ ಧನ್ಯವಾದ ಹೇಳಿದ ಬಿಎಸ್ವೈ
ಇನ್ನು ಮುಂದುವರೆದು ಮಾತನಾಡಿದ ಅವರು, ಭ್ರಷ್ಟಾಚಾರ ಆರೋಪ ಮಾಡಿದ ಅಧಿಕಾರಿಗಳ ಮೇಲೂ ಕೇಸು ಹಾಕಿ ಎಮರ್ಜೆನ್ಸಿ ತಂದಿದಾರೆ. ತಮಿಳುನಾಡಿಗೆ ಕಾವೇರಿ ನೀರು ಬಿಟ್ಟಿರೋದ್ರಿಂದ ರೈತರಿಗೆ ಸಮಸ್ಯೆ ಆಗಲಿದೆ. ಕರ್ನಾಟಕ ರೈತರ ಇಚ್ಛೆ ಪೂರೈಸದೇ, ಅವರಿಗೆ ನ್ಯಾಯ ಕೊಡದೇ. ಇಲ್ಲಿನ ರೈತರಿಗೆ ನೀರು ಕೊಡದೇ ರಾತ್ರಿ ತಮಿಳುನಾಡಿಗೆ ನೀರು ಬಿಡಲಾಗ್ತಿದೆ. ಇದು ರಾಜ್ಯದ ರೈತರಿಗೆ ಮಾಡಿರೋ ದೊಡ್ಡ ಅನ್ಯಾಯ. ಇಡೀ ರಾಜ್ಯದಲ್ಲಿ ನೀರಿನ ಸಮಸ್ಯೆ ಇದೆ, ಬರದ ಸ್ಥಿತಿ ಇದೆ. ಇದರ ಮಧ್ಯೆ ಪಂಪ್ ಗಳಿಗೆ ಕರೆಂಟ್ ಇಲ್ಲ, ಜನ ತತ್ತರಿಸಿ ಹೋಗಿದ್ದಾರೆ. ಇದರ ವಿರುದ್ಧ ಬಿಜೆಪಿ ಹೋರಾಟ ಮಾಡಲಿದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : 250ಕ್ಕೂ ಹೆಚ್ಚು ಟ್ರಕ್ ನಿಲ್ಲಿಸಿ ಪ್ರತಿಭಟನೆ; ಶಾಂತಿನಗರದಲ್ಲಿ ಟ್ರಾಫಿಕ್ ಜಾಮ್!
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.