Monday, March 20, 2023
spot_img
- Advertisement -spot_img

100 ಕ್ಷಯ ರೋಗಿಗಳನ್ನು ದತ್ತು ಪಡೆದ ರಾಜ್ಯಪಾಲ ಗೆಹ್ಲೋಟ್

ಬೆಂಗಳೂರು: “ಜನರು, ಕಾರ್ಪೊರೇಟ್ ಸಂಸ್ಥೆಗಳು, ಸಾಮಾಜಿಕ ಕಾರ್ಯಕರ್ತರು ಟಿಬಿ ರೋಗಿಗಳನ್ನು ದತ್ತು ತೆಗೆದುಕೊಳ್ಳಬೇಕು ಮತ್ತು ಟಿಬಿ ಮುಕ್ತ ಭಾರತಕ್ಕೆ ಕೈ ಜೋಡಿಸಬೇಕು ಎಂದು ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಲ್ಹೋಟ್ ಹೇಳಿದರು.

ಪ್ರಧಾನಮಂತ್ರಿ ಟಿಬಿ ಮುಕ್ತ ಭಾರತ ಅಭಿಯಾನದ ‘ನಿ-ಕ್ಷಯ ಮಿತ್ರ’ದ ಕಾರ್ಯಕ್ರಮದಲ್ಲಿ 100 ಕ್ಷಯ ರೋಗಿಗಳನ್ನು ದತ್ತು ಪಡೆದು ಮಾತನಾಡಿದರು. 2025 ರ ವೇಳೆಗೆ ಭಾರತ ಟಿಬಿ ಮುಕ್ತಗೊಳಿಸಲು ಪ್ರಧಾನಿ ನರೇಂದ್ರ ಮೋದಿ ಗುರಿಯನ್ನು ಹೊಂದಿದ್ದಾರೆ ಎಂದು ತಿಳಿಸಿದರು.

2025 ರ ವೇಳೆಗೆ ಟಿಬಿಯನ್ನು ತೊಡೆದುಹಾಕಲು ರಾಷ್ಟ್ರೀಯ ಕರೆಗೆ ಅನುಗುಣವಾಗಿ, ರಾಜ್ಯವು “ಕ್ಷಯ ಮುಕ್ತ ಕರ್ನಾಟಕ – 2025” ಗಾಗಿ ಈ ಪ್ರಮುಖ ಯೋಜನೆಯನ್ನು ಅಳವಡಿಸಿಕೊಂಡಿದೆ ಎಂದರು. ‘ನಿ-ಕ್ಷಯ 2.0’ ಪೋರ್ಟಲ್ ಮೂಲಕ ಟಿಬಿ ರೋಗಿಗಳಿಗೆ ಸಮುದಾಯದ ಸಹಭಾಗಿತ್ವವನ್ನು ಒದಗಿಸುವ ಉಪಕ್ರಮವು ಶ್ಲಾಘನೀಯವಾಗಿದೆ.

ನಿ-ಕ್ಷಯ ಡಿಜಿಟಲ್ ಪೋರ್ಟಲ್ ಟಿಬಿಯಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಸಮುದಾಯ ಬೆಂಬಲಕ್ಕಾಗಿ ವೇದಿಕೆಯನ್ನು ಒದಗಿಸುತ್ತಿದೆ, ಈ ಪೋರ್ಟಲ್‌ನಲ್ಲಿ ಸುಮಾರು 13.5 ಲಕ್ಷ ಕ್ಷಯ ರೋಗಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ಕರ್ನಾಟಕದಲ್ಲಿ ಗುರುತಿಸಲಾದ 39,745 ಟಿಬಿ ರೋಗಿಗಳ ಪೈಕಿ 25,895 ರೋಗಿಗಳು ಪೋಶಣ್ ಆಧಾರ್‌ಗೆ ಒಪ್ಪಿಗೆ ನೀಡಿದ್ದಾರೆ ಮತ್ತು ಅವರಲ್ಲಿ 25,110 ರೋಗಿಗಳನ್ನು ದತ್ತು ಪಡೆಯಲಾಗಿದೆ ಎಂದು ತಿಳಿದುಬಂದಿದೆ.

Related Articles

- Advertisement -

Latest Articles