Monday, December 4, 2023
spot_img
- Advertisement -spot_img

ಕಾವೇರಿ ನೀರು ವಿಚಾರ : ಮಂಡ್ಯ ರೈತ ಹಿತರಕ್ಷಣಾ ಸಮಿತಿಯಿಂದ ಹೆದ್ದಾರಿ ತಡೆದು ಪ್ರತಿಭಟನೆ

ಮಂಡ್ಯ : ತಮಿಳುನಾಡಿಗೆ ಮತ್ತೆ ನೀರು ಬಿಡಲು ಕಾವೇರಿ ನಿಯಂತ್ರಣ ಸಮಿತಿ ಸೂಚನೆ ನೀಡಿದ ಬೆನ್ನಲ್ಲೇ ರಾಜ್ಯದಲ್ಲಿ ಮತ್ತೆ ಕಾವೇರಿ ಹೋರಾಟ ಭುಗಿಲೆದ್ದಿದೆ. ಈ ನಿಟ್ಟಿನಲ್ಲಿ ನಗರದ ರೈತ ಹಿತರಕ್ಷಣಾ ಸಮಿತಿಯಿಂದ ಹಳೆಯ ಬೆಂಗಳೂರು-ಮೈಸೂರು ಹೆದ್ದಾರಿ ತಡೆದು ಪ್ರತಿಭಟನೆ ಮಾಡಲಾಗಿದೆ.

ಇದನ್ನೂ ಓದಿ : ‘ಮೊದಲೇ ಹೋಗಬೇಕಿತ್ತು, ಈಗ ಯಾಕೆ ಹೋಗ್ತಿದ್ದಾರೆ..?’ ಬಿಜೆಪಿ ನಾಯಕರ ಮೇಲೆ ಪರಂ ಕಿಡಿ!

ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿ ರೈತ ಹಿತರಕ್ಷಣಾ ಸಮಿತಿ ಬೆಂಗಳೂರು-ಮೈಸೂರ್ ಹೆದ್ದಾರಿ ತಡೆಯುವ ಮೂಲಕ ದಿಕ್ಕಾರ ಕೂಗಿದ ಅವರು, ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ ಸ್ಪಷ್ಟವಾಗಿ ತಮಿಳುನಾಡಿಗೆ ನೀರು ಬಿಡಲ್ಲ ಎಂದು ಹೇಳಿಲ್ಲ, ಈ ವಿಚಾರವಾಗಿ ಕಾನೂನು ತಜ್ಞರ ಜೊತೆ ಚರ್ಚೆ ಮಾಡ್ತೀವಿ ಎಂದಿದ್ದಾರೆ. ಆದರೆ ಇದು ತಡವಾದರೆ ಸುಪ್ರೀಂ ಕೋರ್ಟ್ ಮತ್ತೆ ನೀರು ಬಿಡಬೇಕೆಂದು ಆದೇಶ ಕೊಡಬಹುದು, ಆಗ ನಮಗೆ ಕುಡಿಯಲು ನೀರು ಸಿಗಲ್ಲ. ಆದ್ದರಿಂದ ನಮಗೆ ಆತಂಕವಾಗುತ್ತಿದೆ. ಈ ನಿಟ್ಟಿನಲ್ಲಿ ತಮಿಳುನಾಡಿಗೆ ನೀರು ಬಿಡುವ ಪ್ರಶ್ನೆಯೇ ಇಲ್ಲ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನೂ ಓದಿ : ಗ್ರಾಮ ಪಂಚಾಯಿತಿ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರಿಂದ ಪ್ರತಿಭಟನೆ

ಕಾವೇರಿ ನಿರ್ವಹಣಾ ಸಮಿತಿ, ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡಲು ಸೂಚನೆ ನೀಡಿದೆ. ಇದರಿಂದ ಕಾವೇರಿ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಈ ನಿಟ್ಟಿನಲ್ಲಿ ಮಂಡ್ಯ ರೈತ ಹಿತರಕ್ಷಣಾ ಸಮಿತಿ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು, ಜಿಲ್ಲೆಯ ಶಾಸಕರು ಸೇರಿದಂತೆ ರಾಜ್ಯ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles