Thursday, June 8, 2023
spot_img
- Advertisement -spot_img

ಪ್ರಧಾನಿ ಮೋದಿಯವರನ್ನುಹೊಗಳಿದ ಕ್ರಿಕೆಟರ್ ಕೆವಿನ್ ಪೀಟರ್ಸನ್

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಹುಲಿ ಯೋಜನೆಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಕರ್ನಾಟಕಕ್ಕೆ ಭೇಟಿ ನೀಡಿದ್ದರು, ಈ ಬಗ್ಗೆ ಇಂಗ್ಲೆಂಡ್ ಕ್ರಿಕೆಟ್ ತಂಡದ ಮಾಜಿ ನಾಯಕ ಕೆವಿನ್ ಪೀಟರ್ಸನ್ ಮೋದಿ ಬಗ್ಗೆ ಪ್ರಶಂಸೆ ಮಾತುಗಳನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ.

ದೇಶದಲ್ಲಿ ಪ್ರಾಣಿಗಳ ಸಂರಕ್ಷಣೆಗಾಗಿ ಅವರ ಪ್ರಯತ್ನ ತುಂಬಾ ದೊಡ್ಡದು, ಪ್ರಧಾನಿ ಮೋದಿ ಹೀರೋ ಎಂದು ಕೆವಿನ್ ಪೀಟರ್ಸನ್ ಹೊಗಳಿದ್ದಾರೆ.

ನಿಮ್ಮ ಜನ್ಮದಿನದಂದು ಮಧ್ಯಪ್ರದೇಶದಲ್ಲಿ ಚೀತಾಗಳನ್ನು ಬಿಡುಗಡೆ ಮಾಡಿದ್ರೀ, ಕೊರೊನಾ ಸಮಯದಲ್ಲಿ ನಿಮ್ಮ ದೃಢ ನಿರ್ಧಾರಗಳನ್ನು ಮರೆಯೋದಿಲ್ಲ ಈ ಸಂಕಷ್ಟ ಕಾಲದಲ್ಲಿ ಇತರ ದೇಶಗಳಿಗೆ ನೀಡಿದ ಸಹಾಯಕ್ಕೆ ಧನ್ಯವಾದಗಳು. ನಾನು ನಿಮ್ಮನ್ನು ಮತ್ತೆ ಭೇಟಿಯಾಗಲು ಉತ್ಸಾಹಕನಾಗಿದ್ದೇನೆ ಸರ್ ಎಂದು​ ಟ್ವಿಟರ್​ ಹೇಳಿದ್ದಾರೆ.

2022ರಲ್ಲಿ ಭಾರತದಲ್ಲಿ ಹುಲಿಗಳ ಸಂಖ್ಯೆ 3,167 ಆಗಿತ್ತು ಎಂದು ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿದ ಇತ್ತೀಚಿನ ಹುಲಿ ಗಣತಿ ವರದಿಯಲ್ಲಿ ಬಹಿರಂಗಪಡಿಸಿದ್ದಾರೆ.

Related Articles

- Advertisement -spot_img

Latest Articles