Thursday, June 8, 2023
spot_img
- Advertisement -spot_img

ಬಿಜೆಪಿ ಅವಧಿಯಲ್ಲಿನ ಎಲ್ಲ ಹಗರಣ ತನಿಖೆ ಮಾಡಿಸ್ತೇವೆ :ಎಂ.ಬಿ.ಪಾಟೀಲ್

ಬೆಂಗಳೂರು: ಬಿಜೆಪಿ ಅವಧಿಯಲ್ಲಿನ ಎಲ್ಲ ಹಗರಣಗಳನ್ನು ತನಿಖೆ ಮಾಡಿಸುತ್ತೇವೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿ, ಈ ಬಗ್ಗೆ ನಾವು ಮಾತಾಡಿದ್ದು, ಎಲ್ಲ ಇಲಾಖೆಗಳ ಹಗರಣದ ಬಗ್ಗೆ ತನಿಖೆ ಮಾಡಿಸುತ್ತೇವೆ ಎಂದು ಸಿದ್ದರಾಮಯ್ಯನವರು ನನ್ನ ಬಳಿ ಹೇಳಿದ್ದಾರೆ, ಎಲ್ಲೆಲ್ಲಿ ಭ್ರಷ್ಟಚಾರ ಆಗಿದೆಯೋ, ಎಲ್ಲೆಲ್ಲಿ ಅಕ್ರಮಗಳು ಆಗಿದೆಯೋ, ನೀರಾವರಿ ಇರಬಹುದು, ಪಿಎಸ್​ಐ ಸ್ಕ್ಯಾಮ್​ ಇರಬಹುದು ಮತ್ತೊಂದು ಇರಬಹುದು ಎಲ್ಲವನ್ನು ತನಿಖೆ ಮಾಡಿಸುತ್ತೇನೆ. ಯಾರು ತಪ್ಪಿತಸ್ಥರಿದ್ದಾರೆ ಅವರು ಅಧಿಕಾರಿಗಳಾಗಿರಲಿ, ಸಚಿವರಾಗಿರಲಿ ಯಾರೇ ಇರಲಿ ಅವರನ್ನು ಶಿಕ್ಷೆಗೆ ಒಳಪಡಿಸಿ, ಈ ವ್ಯವಸ್ಥೆಯನ್ನು ಬದಲಾವಣೆ ಮಾಡಬೇಕು ಎಂದು ನನಗೆ ಹೇಳಿದ್ದಾರೆ ಎಂದು ತಿಳಿಸಿದರು.

ರಾಜ್ಯದ ಜನತೆಗೆ ಚುನಾವಣಾ ಪೂರ್ವ ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ ನಮ್ಮ ಗ್ಯಾರಂಟಿಗಳ ಈಡೇರಿಕೆಗೆ ಪ್ರಯತ್ನ ಮಾಡುತ್ತೇವೆ ಎಂದರು.’ನಾವು ಜನರಿಗಾಗಿ ಕೆಲಸ ಮಾಡುತ್ತೇವೆ , ಜನರ ಬೇಡಿಕೆ ಪೂರೈಸಲು ಸಿದ್ಧ ಎಂದಿದ್ದಾರೆ.

Related Articles

- Advertisement -spot_img

Latest Articles