Monday, March 27, 2023
spot_img
- Advertisement -spot_img

ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ಡಿಪಿಆರ್‌ನ್ನು ಪರಿಷ್ಕರಿಸಿದ್ದೇವೆ : ಸಚಿವ ಗೋವಿಂದ ಕಾರಜೋಳ

ಬೆಂಗಳೂರು: ಕಳಸಾ ಬಂಡೂರಿ ನಾಲೆ ಆಗಬೇಕೆಂದು ಅನೇಕ ವರ್ಷಗಳಿಂದ ಹೋರಾಟ ನಡೆಯುತ್ತಿತ್ತು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಗಳಾಗಿರದಿದ್ದಲ್ಲಿ ಈ ಯೋಜನೆಗೆ ಮುಕ್ತಿ ಸಿಗುತ್ತಿರಲಿಲ್ಲ. ಅವರು ಆಡಳಿತಗಾರರು, ತಾಂತ್ರಿಕ ಪರಿಣಿತರು, ನೀರಾವರಿ ತಜ್ಞರು ಹೌದು. ಬಸವರಾಜ ಬೊಮ್ಮಾಯಿ ಅವರ ಮಾರ್ಗದರ್ಶನದಲ್ಲಿ ಇಡೀ ಡಿಪಿಆರ್‌ನ್ನು ಪರಿಷ್ಕರಿಸಿದ್ದೇವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿ, ಕಳಸಾ ಬಂಡೂರಿ ನಾಲಾ ಯೋಜನೆಯ ವಿಸ್ತೃತ ಯೋಜನಾ ವರದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿರುವುದು ಹಂಡೆ ಹಾಲು ಕುಡಿದಷ್ಟುಸಂತಸವಾಗಿದೆ ಎಂದು ಸಂತಸಪಟ್ಟರು.
‘ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ನಮಗೆ ಜೊತೆ ಸಾಥ್‌ ನೀಡಿದ್ದರು. ಉತ್ತರ ಕರ್ನಾಟಕದ ಬೆಳಗಾವಿಯಲ್ಲೇ ಅಧಿವೇಶನ ನಡೆದಿರುವಾಗಲೇ ಕಳಸಾ ಬಂಡೂರಿ ನಾಲೆ ಯೋಜನೆಗೆ ಕೇಂದ್ರ ಅನುಮತಿ ನೀಡಿರುವುದು ಸಂತೋಷವಾಗಿದೆ. ಇದಕ್ಕೆ ಕಾರಣರಾದ ನಾಯಕರು ಹಾಗೂ ಅಧಿಕಾರಿಗಳು, ಹೋರಾಟಗಾರರಿಗೆ ಅಭಿನಂದನೆ’ ಎಂದು ತಿಳಿಸಿದರು.

‘ಜಲಾಶಯದ ಎತ್ತರಗಳನ್ನು ಕಡಿಮೆ ಮಾಡಿ ನಮಗೆ ನಿಗದಿಯಾಗಿರುವ ಕಳಸಾ- 1.72 ಟಿಎಂಸಿ, ಬಂಡೂರಿ- 2.18 ಟಿಎಂಸಿ ಸೇರಿ ಒಟ್ಟು 3.90 ಟಿಎಂಸಿ ನೀರನ್ನು ಉಪಯೋಗ ಮಾಡಿಕೊಳ್ಳುವುದಕ್ಕೆ ಪರಿಷ್ಕೃತ ಡಿಪಿಆರ್‌ ಅನ್ನು ಸಲ್ಲಿಸಿದ್ದೆವು. ಅದಾದ ಮೇಲೆ ಹತ್ತಾರು ಬಾರಿ ದಿಲ್ಲಿಗೆ ಹೋಗಿ ಬಂದಿದ್ದೇವೆ.

ಮುಖ್ಯಮಂತ್ರಿಗಳು ಸ್ವತಃ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹತ್ತಿರ ಅನೇಕ ಬಾರಿ ಭೇಟಿ ಮಾಡಿ ಈ ಯೋಜನೆಗೆ ಒಪ್ಪಿಗೆ ಪಡೆದುಕೊಂಡಿದ್ದಾರೆ’ ಎಂದರು.

Related Articles

- Advertisement -

Latest Articles