ಮತ್ತೊಬ್ಬ ಏಕನಾಥ ಶಿಂಧೆ ಹುಟ್ಟಲು ಸಾಧ್ಯವಿಲ್ಲ; ನವೆಂಬರ್ ಕ್ರಾಂತಿಗೆ ಹೈಕಮಾಂಡ್ಅ ವಕಾಶ ನೀಡಲ್ಲ..!

ಬೆಂಗಳೂರು : ಕಾಂಗ್ರೆಸ್‌ ಪಕ್ಷದ ಹೈಕಮಾಂಡ್ ಯಾವುದೇ ಕ್ರಾಂತಿಗಳಿಗೆ ಅವಕಾಶ ನೀಡುವುದಿಲ್ಲ. ಏಕನಾಥ್ ಶಿಂಧೆ ಒಬ್ಬರೇ, ಅಜಿತ್ ಪವಾರ್ ಕೂಡ ಒಬ್ಬರೇ. ಮತ್ತೊಬ್ಬ ಏಕನಾಥ್ ಶಿಂಧೆ ಅಥವಾ ಪವಾರ್ ಹುಟ್ಟಿಕೊಳ್ಳಲು ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಪರೋಕ್ಷವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ತಿರಿಗೇಟು ನೀಡದ್ಧಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಪುನರ್‌ ರಚನೆ ಮತ್ತು ನಾಯಕತ್ವ ಬದಲಾವಣೆ ಬಗ್ಗೆ ನನಗೆ ಗೊತ್ತಿಲ್ಲ. ಇದನ್ನು ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ನಿರ್ಧರಿಸಲಾಗುತ್ತದೆ. ಆದ್ದರಿಂದ ನಾನು ಅದರ ಬಗ್ಗೆ ಏನನ್ನೂ ಹೇಳಲ್ಲ. ನವೆಂಬರ್ ಕ್ರಾಂತಿಯ ಬಗ್ಗೆಯೂ ನನಗೆ ಗೊತ್ತಿಲ್ಲ. ಪಕ್ಷವಿದೆ ಮತ್ತು ಹೈಕಮಾಂಡ್ ಇದೆ. ಅವರು ಯಾವುದೇ ಕ್ರಾಂತಿಗೆ ಏಕೆ ಅವಕಾಶ ನೀಡುತ್ತಾರೆ? ಮಹಾರಾಷ್ಟ್ರ ಮಾದರಿ ಕರ್ನಾಟಕದಲ್ಲಿ ಅಸಾಧ್ಯ ಎಂದರು.

ಇನ್ನು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಜಾರಕಿಹೊಳಿ, ಪಕ್ಷ ಮತ್ತು ಸರ್ಕಾರದಿಂದ ಪ್ರತ್ಯೇಕವಾದ ಅಹಿಂದ ಚಳುವಳಿಯನ್ನು ಮುನ್ನಡೆಸುವ ಬಗ್ಗೆ ಮಾತನಾಡಿದ್ದಾರೆ. ಇದಕ್ಕೂ, ಮುಖ್ಯಮಂತ್ರಿ ಬದಲಾವಣೆಗೂ ಯಾವುದೇ ಸಂಬಂಧವಿಲ್ಲ. ನಾನು ಸಿಎಂ ಹುದ್ದೆ ಅಥವಾ ಪಕ್ಷದ ಅಧ್ಯಕ್ಷ ಹುದ್ದೆಯನ್ನು ಕೇಳಿಲ್ಲ ಮತ್ತು ಅವರು ಕೂಡ ಸಿಎಂ ಅಥವಾ ಪಕ್ಷದ ಅಧ್ಯಕ್ಷ ಹುದ್ದೆಯ ಬಗ್ಗೆ ಮಾತನಾಡಲಿಲ್ಲ. 2028 ರಲ್ಲಿ ಸಿಎಂ ಹುದ್ದೆಗೆ ಹಕ್ಕು ಮಂಡಿಸುತ್ತೀರಾ ಎಂದು ಕೇಳಿದಾಗ, ಸಮಯ ಬಂದಾಗ ನೋಡೋಣ. ಚುನಾವಣೆ ನಡೆಯಬೇಕು ಮತ್ತು ಪರಿಸ್ಥಿತಿಯನ್ನು ಅವಲಂಬಿಸಿ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು. ಇನ್ನು ದಲಿತರಿಗೆ ಸಿಎಂ ಅವಕಾಶ ನೀಡಿದರೆ ಒಳ್ಳೆಯದು ಎಂದು ನಾನು ಸೇರಿದಂತೆ ಹಲವರು ಹೇಳಿದ್ದೇವೆ. ಪಕ್ಷವು ಅಂತಿಮವಾಗಿ ಯಾರು ಮತ್ತು ಯಾವ ಸಮುದಾಯದಿಂದ ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ನಿರ್ಧರಿಸುತ್ತದೆ ಎಂದರು.

Leave a Reply

Your email address will not be published. Required fields are marked *