ಬೆಂಗಳೂರು : ಕಾಂಗ್ರೆಸ್ ಪಕ್ಷ “ಭಯೋತ್ಪಾದಕರ ಪಕ್ಷ” ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.
‘ಬೂತ್ ವಿಜಯ ಅಭಿಯಾನ’ದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾದರೆ ಭಯೋತ್ಪಾದಕರಿಗೆ ಫೀಲ್ಡ್ ಡೇ ಆಗುತ್ತದೆ ಎಂದರು.ರಸ್ತೆ ಕಾಮಗಾರಿ, ಚರಂಡಿ ಅಭಿವೃದ್ಧಿ ಕುರಿತು ಬಿಟ್ಟು, ಲವ್ ಜಿಹಾದ್ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬುದರ ಕುರಿತು ಜನರು ಚರ್ಚೆಯಲ್ಲಿ ತೊಡಗುವಂತೆ ಮಾಡಿ ಎಂದು ಕಾರ್ಯಕರ್ತರಿಗೆ ಸೂಚಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ‘ಲವ್ ಜಿಹಾದ್’ ಹೆಚ್ಚಾಗಲಿದೆ. ಗೋಹತ್ಯೆ ಮತ್ತು ಧಾರ್ಮಿಕ ಮತಾಂತರದ ವಿರುದ್ಧದ ಕಾನೂನುಗಳನ್ನು ಹಿಂಪಡೆಯುತ್ತಾರೆ. ಜನರು ಈಗ ‘ನವ ಕರ್ನಾಟಕ’ ಬೇಕೇ ಅಥವಾ ‘ಭಯೋತ್ಪಾದನೆಯ ನಾಡು ಬೇಕೇ ಎಂಬುದನ್ನು ನಿರ್ಧರಿಸಬೇಕಿದೆ ಎಂದು ತಿಳಿಸಿದರು.
ರಾಮನಗರ, ಹಾಸನ ಮತ್ತು ಮಂಡ್ಯ ಜಿಲ್ಲೆಗಳಾದ ಒಕ್ಕಲಿಗ ಪ್ರಾಬಲ್ಯವಿರುವ ಜಿಲ್ಲೆಗಳಲ್ಲಿ ಅಮಿತ್ ಶಾ ಪ್ರವಾಸಕ್ಕೆ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಎಂಟು ಸ್ಥಾನಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷವೇ ಭ್ರಷ್ಟ ಪಕ್ಷ, ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅತ್ಯಂತ ಭ್ರಷ್ಟರು , ಬಳಿಕ 100 ದಿನ ಬಾಕಿ ಇರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮ ಗೆಲುವು ನಮ್ಮ ಸಂಘಟನೆಯ ಬಲದ ಮೇಲೆ ಇರಬೇಕು. ಭಾರತವು ಸಾಂಸ್ಕೃತಿಕವಾಗಿ ಪರಿವರ್ತನೆ ಹೊಂದಬೇಕು ಮತ್ತು ಅದಕ್ಕಾಗಿ ನಾವು ಬೂತ್ ಮಟ್ಟಗಳಲ್ಲಿ ಗೆಲ್ಲಬೇಕು ಎಂದು ಹೇಳಿದರು.