ಶಿವಮೊಗ್ಗ : ಈಗಾಗಲೇ ಗ್ಯಾರಂಟಿ ಯೋಜನೆಗಳ ಮೂಲಕ ರಾಜ್ಯದ ಜನರ ಮನಗೆದ್ದಿರುವ ಕಾಂಗ್ರೆಸ್ ಸರ್ಕಾರವು ಇದೀಗ ಮತ್ತೊಂದು ಯೋಜನೆ ಜಾರಿ ಮಾಡಲು ಚಿಂತನೆ ನಡೆಸಿದೆ. ಈ ಬಗ್ಗೆ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರಲು ನೂತನ ಯೋಜನೆ ಜಾರಿ ಮಾಡುವುದಾಗಿ ಸುಳಿವು ನೀಡಿದ್ದಾರೆ.
ಇಂದು ಸೊರಬದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಆಡಳಿತಾರೂಢ ಸರ್ಕಾರದ ನೂತನ ಶೈಕ್ಷಣಿಕ ಯೋಜನೆಗಳು ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ಕರೆತರುವಲ್ಲಿ ಸಹಕಾರಿಯಾಗಿವೆ ಎಂದರು.


ಇಂದು ಸೊರಬ ತಾಲೂಕು ಕುಬಟೂರಿನ ಕೆರೆಗೆ ತಮ್ಮ ಕುಟುಂಬದ ಸದಸ್ಯರು ಹಾಗೂ ಊರಿನ ಗ್ರಾಮಸ್ಥರೊಂದಿಗೆ ಬಾಗಿನ ಸಮರ್ಪಿಸಿದ ನಂತರ ಅಲ್ಲಿನ ಶಾಲಾ ಆವರಣದಲ್ಲಿ ಸಸ್ಯ ಶ್ಯಾಮಲ ಯೋಜನೆಯಡಿ ಸಸಿಗಳನ್ನು ನೆಟ್ಟು, ಗ್ರಾಮಸ್ಥರಿಂದ ನಾಗರಿಕ ಸನ್ಮಾನವನ್ನು ಸ್ವೀಕರಿಸಿದರು.
ಇದನ್ನೂ ಓದಿ : ಕರ್ನಾಟಕಕ್ಕೆ ಹಿನ್ನಡೆ; ತಮಿಳುನಾಡಿಗೆ ಮತ್ತೆ 15 ದಿನ ಕಾವೇರಿ ನೀರು ಬಿಡಲು ಸೂಚನೆ!


ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದ ಮಕ್ಕಳು ಶೈಕ್ಷಣಿಕ ಚಟುವಟಿಕೆಗಳಿಂದ ದೂರ ಸರಿಯದಂತೆ ಹಾಗೂ ವಿದ್ಯಾರ್ಥಿಗಳು ನಿರಂತರವಾಗಿ ಓದಿನಲ್ಲಿ ತೊಡಗಿಕೊಳ್ಳುವಂತೆ ಎರಡು ಬಾರಿ ಪೂರಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ಈ ಯೋಜನೆಯ ಅನುಷ್ಠಾನದಿಂದ ಸುಮಾರು 1,19,000 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಆ ಪೈಕಿ 41,000 ವಿದ್ಯಾರ್ಥಿಗಳು ಉತ್ತೀರ್ಣರಾಗಿ ತಮ್ಮ ಓದನ್ನು ಮುಂದುವರಿಸಿರುವುದು ಸಂತಸ ತಂದಿದೆ ಎಂದರು.
ಇದನ್ನೂ ಓದಿ : ಯಾರ ಜೊತೆಗಾದ್ರೂ ಮೈತ್ರಿ ಮಾಡ್ಕೋತ್ತಿವಿ ಇವರಿಗೇನು ಕಾಯಿಲೆ?
ಮಕ್ಕಳಲ್ಲಿ ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಒತ್ತು ನೀಡಲಾಗಿದೆ. ಈ ದಿಸೆಯಲ್ಲಿ ಮಕ್ಕಳಲ್ಲಿ ಪರಿಸರದ ಕುರಿತು ಭಾವನಾತ್ಮಕ ಸಂಬಂಧಗಳು ಸೃಜಿಸಬೇಕು. ಆ ನಿಟ್ಟಿನಲ್ಲಿ ರಾಜ್ಯದ ಪ್ರತಿ ಶಾಲೆಯಲ್ಲಿ ಮಕ್ಕಳೇ ಗಿಡಗಳನ್ನು ನೆಟ್ಟು ಪೋಷಿಸುವ ಯೋಜನೆ ಜಾರಿಗೊಳಿಸಲಾಗಿದೆ.
ಇದರಿಂದಾಗಿ ಮಕ್ಕಳಲ್ಲಿ ಚಿಕ್ಕಂದಿನಿಂದಲೇ ಪ್ರಕೃತಿ- ಪರಿಸರದ ಕಾಳಜಿ ಬರಲಿದೆ. ಅಲ್ಲದೆ, ಮಕ್ಕಳಲ್ಲಿ ಒಳ್ಳೆಯ ಗುಣಗಳನ್ನು ಕಾಣಬಹುದಾಗಿದೆ. ಪ್ರಸ್ತುತ ಈ ಯೋಜನೆಯಡಿ ಸೆ. 22ರ ಒಳಗಾಗಿ ರಾಜ್ಯದಲ್ಲಿ 50 ಲಕ್ಷ ಸಸಿಗಳನ್ನು ವಿತರಿಸಲಾಗುವುದು ಎಂದರು.


ಅರಣ್ಯ ಇಲಾಖೆ ಈಗಾಗಲೇ 4 ಕೋಟಿ ಗಿಡಗಳನ್ನು ನೀಡಿದ್ದು, ಇನ್ನೂ ಒಂದು ಕೋಟಿ ಸಸಿಗಳನ್ನು ನೀಡಲಿದೆ ಎಂದರು. ಸೊರಬ ತಾಲೂಕು ಕುಬಟೂರಿನ ಕೆರೆಗೆ ತಮ್ಮ ಕುಟುಂಬದ ಸದಸ್ಯರು ಹಾಗೂ ಊರಿನ ಗ್ರಾಮಸ್ಥರೊಂದಿಗೆ ಬಾಗಿನ ಸಮರ್ಪಿಸಿದರು. ಅಲ್ಲಿನ ಶಾಲಾ ಆವರಣದಲ್ಲಿ ಸಸ್ಯ ಶ್ಯಾಮಲ ಯೋಜನೆಯಡಿ ಸಸಿಗಳನ್ನು ನೆಟ್ಟರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.