Friday, March 24, 2023
spot_img
- Advertisement -spot_img

ನಾನು, ಡಿ.ಕೆ.ಶಿವಕುಮಾರ್ ಇಬ್ಬರೂ ಸಿಎಂ ಆಕಾಂಕ್ಷಿಗಳು : ಸಿದ್ದರಾಮಯ್ಯ

ಬೆಳಗಾವಿ: ಸಿಎಂ ಆಕಾಂಕ್ಷಿಯಾಗುವುದರಲ್ಲಿ ಯಾವುದೇ ತಪ್ಪಿಲ್ಲ. ನಾನು ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಇಬ್ಬರೂ ಸಿಎಂ ಆಕಾಂಕ್ಷಿಗಳಾಗಿದ್ದೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ನಾವು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿದ್ದೇವೆ ಮತ್ತು ನಾವೆಲ್ಲರೂ ಆಕಾಂಕ್ಷೆಗಳನ್ನು ಹೊಂದಿದ್ದೇವೆ. ಕಾಂಗ್ರೆಸ್ ಪ್ರಜಾಸತ್ತಾತ್ಮಕ ಪಕ್ಷವಾಗಿದ್ದು, ಚುನಾಯಿತ ಶಾಸಕರು ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡುತ್ತಾರೆ. ಆದರೆ ಬಿಜೆಪಿಯಲ್ಲಿ ವಿಷಯಗಳು ವಿಭಿನ್ನವಾಗಿವೆ ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾಗಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಒಂದು ಅವಕಾಶ ಮಾಡಿಕೊಡಿ ಎಂದು ಡಿಕೆಶಿಕುಮಾರ್ ಹಲವು ವೇದಿಕೆಗಳಲ್ಲಿ ಕೇಳಿಕೊಂಡಿದ್ದಾರೆ. ಜನರ ಪರವಾಗಿ ಕೆಲಸ ಮಾಡಿದ್ದು, ಮಾಡೋದು ಕಾಂಗ್ರೆಸ್ ಸರ್ಕಾರ ಮಾತ್ರ. ಬಿಜೆಪಿ ಯಾವತ್ತೂ ಜನರ ಬದುಕಿನ ಬದಲಾವಣೆ ಮಾಡೋ ಯೋಜನೆ ಮಾಡಿಲ್ಲ. ಹಾಗಾಗಿ ಕಾಂಗ್ರೆಸ್ ಬೆಂಬಲಿಸಿ. ಜೆಡಿಎಸ್​ ಬರಲ್ಲ ಓಟ್ ವೇಸ್ಟ್ ಮಾಡಿಕೊಳ್ಳಬಾರದು ಎಂದು ಜನರೇ ತೀರ್ಮಾನ ಮಾಡಿದ್ದಾರೆ, ಹಾಗಾಗಿ ಜೆಡಿಎಸ್​ಗೆ ಮತ ನೀಡಿ ನೀವು ನಿಮ್ಮ ಓಟ್ ವೇಸ್ಟ್ ಮಾಡಬೇಡಿ. ರೈತನ ಮಗನಿಗೆ ಅವಕಾಶ ಕೊಡಿ ಎಂದು ಡಿಕೆ ಶಿವಕುಮಾರ್​ ಮನವಿ ಮಾಡಿದ್ದರು

Related Articles

- Advertisement -

Latest Articles