Wednesday, November 29, 2023
spot_img
- Advertisement -spot_img

ಜ.22 ರಾಮ ಮಂದಿರ ಉದ್ಘಾಟನೆ: ದೇಶಾದ್ಯಂತ 10 ಕೋಟಿ ಕುಟುಂಬಕ್ಕೆ ಆಹ್ವಾನ!

ಉತ್ತರ ಪ್ರದೇಶ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಾಲಾನ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಜನವರಿ 22 ರಂದು ನಡೆಯಲಿದ್ದು, ಈ ಕಾರ್ಯಕ್ರಮದಲ್ಲಿ ಭಾಗಿಯಾಗಲು ವಿಶ್ವ ಹಿಂದೂ ಪರಿಷತ್ ದೇಶಾದ್ಯಂತ 10 ಕೋಟಿ ಕುಟುಂಬಗಳಿಗೆ ಆಹ್ವಾನ ನೀಡುವುದಾಗಿ ಹೇಳಿದೆ.

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಮಹಾಸಚಿವ ಚಂಪತ್ ರಾಯ್ ಅವರು, ಜನವರಿ 22 ರಂದು ದೇವಾಲಯದಲ್ಲಿ ಶ್ರೀರಾಮನ ಮೂರ್ತಿ ಸ್ಥಾಪಿಸಲಾಗುವುದು ಎಂದು ಖಚಿತಪಡಿಸಿದ್ದಾರೆ. ಮತ್ತು ಪ್ರಧಾನಿ ಮೋದಿ ಅವರಿಗೂ ಈಗಾಗಲೇ ಆಹ್ವಾನವನ್ನು ನೀಡಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ದೀಪಾವಳಿಗೆ 3 ಕೋಟಿ ಮದ್ಯ ಬಾಟಲಿ ಮಾರಾಟ, ದೆಹಲಿ ಸರ್ಕಾರಕ್ಕೆ ₹525 ಕೋಟಿ ಆದಾಯ!

136 ಸನಾತನ ಸಂಪ್ರದಾಯಗಳ 25,000 ಕ್ಕೂ ಹೆಚ್ಚು ಹಿಂದೂ ಧಾರ್ಮಿಕ ಮುಖಂಡರನ್ನು ಪವಿತ್ರ ಸಮಾರಂಭಕ್ಕೆ ಆಹ್ವಾನಿಸಲು ಟ್ರಸ್ಟ್ ಯೋಜನೆ ರೂಪಿಸಿಕೊಂಡಿದೆ. ಪಟ್ಟಾಭಿಷೇಕ ಸಮಾರಂಭದಲ್ಲಿ ಪಾಲ್ಗೊಳ್ಳುವ 25,000 ಸಂತರ ಜೊತೆಗೆ, 10,000 “ವಿಶೇಷ ಅತಿಥಿಗಳು” ಸಹ ಪಾಲ್ಗೊಳ್ಳಲಿದ್ದಾರೆ.

ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಉದ್ಘಾಟನೆಗೂ ಮುನ್ನ ಅಯೋಧ್ಯೆಯನ್ನು ಸುಂದರಗೊಳಿಸಲು ಮತ್ತು ಅತ್ಯಾಧುನಿಕ ನಗರ ಸೌಕರ್ಯಗಳನ್ನು ಒದಗಿಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿದ್ದಾರೆ.

ಇದನ್ನೂ ಓದಿ: ಬಿಜೆಪಿಯ ಚುನಾವಣಾ ಪ್ರಚಾರ ವೀಕ್ಷಿಸಲು ವಿದೇಶಿ ರಾಜತಾಂತ್ರಿಕರು

ನವೆಂಬರ್ 2019 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ರಾಮ ಮಂದಿರ ನಿರ್ಮಾಣಕ್ಕೆ ದಾರಿ ಮಾಡಿಕೊಟ್ಟಿತು. ನಂತರ ಕೇಂದ್ರವು ನಿರ್ಮಾಣ ಹಂತದಲ್ಲಿ ಮಂದಿರಕ್ಕೆ ಬೇಕಾದ ನಿರ್ಧಾರಗಳನ್ನು ತೆಗೆದುಕೊಳ್ಳಲು ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರವನ್ನು ಸ್ಥಾಪಿಸಿತು. ನಂತರ ಆಗಸ್ಟ್ 5, 2020 ರಂದು ಪ್ರಧಾನಿ ಮೋದಿ ಅವರು ದೇವಾಲಯಕ್ಕೆ ಅಡಿಪಾಯ ಹಾಕಿದ್ದರು.

ಈಗ ಅಯೋಧ್ಯೆಯಲ್ಲಿ ದೇವಾಲಯ ಕಾಮಗಾರಿ ಸಾಕಷ್ಟು ಮಟ್ಟದಲ್ಲಿ ಪೂರ್ಣಗೊಂಡಿದ್ದು, ರಾಮನ ಮೂರ್ತಿ ಸ್ಥಾಪನೆಗೆ ಕ್ಷಣಗಣನೆ ಆರಂಭವಾಗಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles