ಹುಬ್ಬಳ್ಳಿ: ಬಿಜೆಪಿ ಶಾಸಕರಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಭಾರತೀಯ ಜನತಾ ಪಕ್ಷದ ಹಿರಿಯ, ಕಿರಿಯ ಶಾಸಕರ ಅಭಿಪ್ರಾಯ ಸಂಗ್ರಹಿಸಿ ವಿರೋಧ ಪಕ್ಷದ ನಾಯಕರ ಆಯ್ಕೆ ಮಾಡಲಾಗಿದೆ ಎಂದು ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಹೇಳಿದ್ದಾರೆ.
ನಗರದಲ್ಲಿ ವಿರೋಧ ಪಕ್ಷದ ನಾಯಕನ ಆಯ್ಕೆಗೆ ಶಾಸಕರ ಅಪಸ್ವರ ಹಿನ್ನೆಲೆ ಬಗ್ಗೆ ಮಾತನಾಡಿದ ಅವರು, ಎಲ್ಲ ಶಾಸಕರನ್ನು ಪ್ರತ್ಯೇಕವಾಗಿ ಮಾತನಾಡಿಸಲಾಗಿದೆ. ವೀಕ್ಷಕರಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ದುಶ್ಯಂತ ಗೌತಮ ಆಗಮಿಸಿದ್ದರು. ಯಾವುದೇ ಭಿನ್ನಾಭಿಪ್ರಾಯ ಬರದಂತೆ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗಿದೆ. ಶಾಸಕರ ಅಭಿಪ್ರಾಯ ಸಂಗ್ರಹಿಸಿ ಕೇಂದ್ರದ ಹಿರಿಯ ನಾಯಕರಿಗೆ ರವಾನೆ ಮಾಡಲಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: ವಿಡಿಯೋದಲ್ಲಿ ಸಿಎಂ ಪುತ್ರ ಯತೀಂದ್ರ ಹೇಳಿದ ವಿವೇಕಾನಂದ ಇವ್ರೇನಾ?
ವಿರೋಧ ಪಕ್ಷದ ನಾಯಕನ ಆಯ್ಕೆ ಮೊದಲು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಷಯ ಮಂಡನೆ ಮಾಡಿದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಎಲ್ಲ ಶಾಸಕರು ಇದಕ್ಕೆ ವಿರೋಧ ಮಾಡದೇ ಅನುಮೋದನೆ ನೀಡಿದ್ದಾರೆ ಎಂದು ಹೇಳಿದ್ದಾರೆ.
ಯಾವುದೇ ಭಿನ್ನಾಭಿಪ್ರಾಯ ಇರಲಿಲ್ಲ ಇದರೊಂದಿಗೆ ಹಿರಿಯ ಶಾಸಕರಾದ ಆರ್ ಅಶೋಕ ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾದರು. ಸತತವಾಗಿ ಏಳು ಸಲ ಶಾಸಕರಾಗಿ ಆಯ್ಕೆಯಾದವರು
ಹಿರಿಯ ಶಾಸಕರು ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ನಾಯಕರಾಗಿದ್ದಾರೆ. ರಾಜ್ಯದ ಆಡಳಿತ ವೈಖರಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತಗೊಂಡಿದೆ ಯಾವುದೇ ಜನಪರ ಕೆಲಸ ಆಗ್ತಾ ಇಲ್ಲ, ಡಿಸೆಂಬರ್ 4 ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲ ಅಧಿವೇಶನದಲ್ಲಿ ಸಮರ್ಥವಾಗಿ ಮಾತನಾಡುತ್ತೇವೆ. ಯಾವುದೇ ರೀತಿಯ ಸರ್ಕಾರದ ಪರ ಸಾಫ್ಟ್ ಕಾರ್ನರ್ ಇಲ್ಲ ಎಂದು ತಿಳಿಸಿದರು.
ಇದನ್ನೂ ಓದಿ: ಸುದ್ದಿಗೋಷ್ಠಿ ಕರೆದ ಮಾಜಿ ಸಂಸದ ಮುದ್ದಹನುಮೇಗೌಡ: ಮತ್ತೆ ‘ಕೈ’ ಹಿಡಿಯುವ ಸಾಧ್ಯತೆ
ನಾಳೆ ಅಹ್ಮದಾಬಾದ್ ನಲ್ಲಿ ನಡೆಯಲಿರುವ ಭಾರತ ಆಸ್ಟ್ರೇಲಿಯಾ ವಿಶ್ವ ಕಪ್ ಪಂದ್ಯ ನಾಳಿನ ಪಂದ್ಯದಲ್ಲಿ ಭಾರತ ಗೆಲ್ಲಲಿದೆ. ಈಗಾಗಲೇ 10 ಪಂದ್ಯಗಳಲ್ಲಿ ಭಾರತ ಗೆದ್ದಿದೆ. ನಾಳಿನ ಪಂದ್ಯದಲ್ಲಿ ಸಹ ಭಾರತ ಗೆಲ್ಲುತ್ತದೆ. ರೋಹಿತ್ ಶರ್ಮಾ ನೇತೃತ್ವದಲ್ಲಿನ ತಂಡ ಒಳ್ಳೆಯ ಆಟ ಆಡಲಿದೆ ಕ್ರಿಕೆಟ್ ವಿಶ್ಚ ಕಪ್ ಗೆದ್ದು ಬರಲಿ ಎಂದು ಹಾರೈಸಿದ್ದಾರೆ.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.