Monday, December 11, 2023
spot_img
- Advertisement -spot_img

Aditya L1 Launch : ಮನುಕುಲದ ಕಲ್ಯಾಣಕ್ಕಾಗಿ ನಮ್ಮ ಪ್ರಯತ್ನ ಮುಂದುವರಿಯಲಿದೆ : ಪ್ರಧಾನಿ ಮೋದಿ

ಬೆಂಗಳೂರು : ಭಾರತದ ಮೊದಲ ಬಾಹ್ಯಾಕಾಶ ನೌಕೆ ಆದಿತ್ಯ ಎಲ್-1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದರು.

ಈ ಕುರಿತು ಟ್ವೀಟ್ ಮಾಡಿರುವ ಅವರು, “ಚಂದ್ರಯಾನ-3ರ ಯಶಸ್ಸಿನ ನಂತರ ಭಾರತ ತನ್ನ ಬಾಹ್ಯಾಕಾಶ ಯಾನವನ್ನು ಮುಂದುವರೆಸಿದೆ. ಭಾರತದ ಮೊದಲ ಸೌರ ಮಿಷನ್ ಆದಿತ್ಯ ಎಲ್-1 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದಕ್ಕಾಗಿ ಇಸ್ರೋದಲ್ಲಿರುವ ನಮ್ಮ ವಿಜ್ಞಾನಿಗಳುಮತ್ತು ಇಂಜಿನಿಯರ್ ಗಳಿಗೆ ಅಭಿನಂದನೆಗಳು. ‘ಇಡೀ ಮಾನವಕುಲದ ಕಲ್ಯಾಣಕ್ಕಾಗಿ ಬ್ರಹ್ಮಾಂಡದ ಬಗ್ಗೆ ಇನ್ನಷ್ಟು ಮಾಹಿತಿ ಪಡೆಯುವ ಸಲುವಾಗಿ ನಮ್ಮ ದಣಿವರಿಯದ ವೈಜ್ಞಾನಿಕ ಪ್ರಯತ್ನಗಳು ಮುಂದುವರಿಯುತ್ತವೆ’ ಎಂದು ಹೇಳಿದ್ದಾರೆ.

ಚಂದ್ರಯಾನ-3ರ ಯಶಸ್ಸಿನ ಬಳಿಕ ಇಸ್ರೋದ ಬಹು ನಿರೀಕ್ಷಿತ ಸೂರ್ಯಯಾನ ಯೋಜನೆಯ ಬಾಹ್ಯಾಕಾಶ ನೌಕೆ ಆದಿತ್ಯ ಎಲ್-1 ಇಂದು ಉಡಾವಣೆಯಾಗಿದೆ. ಅಂಧ್ರ ಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಉಡಾವಣಾ ಕೇಂದ್ರದಿಂದ ಆದಿತ್ಯ ಎಲ್-1 ನೌಕೆ ನಭಕ್ಕೆ ಚಿಮ್ಮಿದೆ.

ಮಿಷನ್ ಆದಿತ್ಯ ಎಲ್-1 ನೌಕೆ ನಾಲ್ಕು ತಿಂಗಳ ಬಳಿಕ, ಅಂದರೆ ಮುಂದಿನ ಜನವರಿ ಮೊದಲ ವಾರದಲ್ಲಿ ನಿಗದಿತ ಹಾಲೋ ಆರ್ಬಿಟ್‌ಗೆ (ಹಾಲೋ ಕಕ್ಷೆ) ಸೇರಲಿದೆ. ಸೂರ್ಯನ ಅಧ್ಯಯನದ ಉದ್ದೇಶದಿಂದ ಆದಿತ್ಯ ಎಲ್-1 ಮಿಷನ್ ಉಡಾವಣೆ ಮಾಡಲಾಗಿದೆ. ಇದು ಬರೋಬ್ಬರಿ 15 ಲಕ್ಷ ಕಿ.ಮೀ ದೂರ ಹಾರಾಟ ನಡೆಸುವ ಮೂಲಕ ಭೂಮಿಯ ಗುರುತ್ವಾಕರ್ಷಣ ರೇಖೆಯನ್ನು ದಾಟಿ ನಿಗದಿತ ಕಕ್ಷೆಯನ್ನು ಸೇರಲಿದೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles