Friday, September 29, 2023
spot_img
- Advertisement -spot_img

ಕಾವೇರಿ ಕಿಚ್ಚು; ಪ್ರತಿಭಟನಾನಿರತ ರೈತರು ಪೊಲೀಸ್ ವಶಕ್ಕೆ

ಮಂಡ್ಯ: ರೈತರ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಂಡಿದೆ. ಕಾವೇರಿ ನದಿ ನೀರು ಬಿಡುಗಡೆ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ ರೈತರು ರಸ್ತೆಗಿಳಿದಿದ್ದಾರೆ. ಈ ನಡುವೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆ ವೇಳೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸ್ಥಳದಲ್ಲಿ ಭಾರೀ ಗದ್ದಲ ಏರ್ಪಟ್ಟು, ಪೊಲೀಸರೊಂದಿಗೆ ರೈತರು ವಾಗ್ವಾದಕ್ಕಿಳಿದಿದ್ದರು. ಈ ವೇಳೆ ರೈತರನ್ನು ಬಸ್‌ನಲ್ಲಿ ಹತ್ತಿಸಿ ಪೊಲೀಸರು ಕರೆದೊಯ್ದಿದ್ದಾರೆ. ಕಳೆದೆರಡು ದಿನದಿಂದ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇಂದು ಪ್ರತಿಭಟನೆ ಉಗ್ರರೂಪ ಪಡೆದುಕೊಂಡಿದೆ.

ಇದನ್ನೂ ಓದಿ: ‘ಮೊದಲೇ ಇವಕ್ಕೆ ದೇವರು-ದಿಂಡ್ರು ಮೇಲೆ ನಂಬಿಕೆ ಇಲ್ಲ, ಅದ್ಕೆ ಮಳೆಯೂ ಆಗ್ತಿಲ್ಲ’

ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ತಕ್ಷಣ ನೀರು ಬಿಡುವುದನ್ನು ನಿಲ್ಲಿಸಬೇಕು ಎಂದು ರೈತರು ಆಗ್ರಹಿಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles