Friday, September 29, 2023
spot_img
- Advertisement -spot_img

ʼಇಸ್ರೋʼಗೆ ರಾಜ್ಯ ನಾಯಕರಿಂದ ಶುಭಾಶಯಗಳ ಮಹಾಪೂರ!

ಬೆಂಗಳೂರು: ಚಂದ್ರಯಾನದ ಯಶಸ್ಸಿನಿಂದ ಇಡೀ ದೇಶದ ಕನಸು ಸಾಕಾರವಾಗಿದೆ. ಇನ್ನು ಇದರ ಹೊಣೆ ಹೊತ್ತಿದ್ದ ಇಸ್ರೋಗೆ ಎಲ್ಲರೂ ಶುಭಹಾರೈಸುತ್ತಿದ್ದಾರೆ. ಚಂದ್ರಯಾನಕ್ಕಾಗಿ ಶ್ರಮಿಸಿ ವಿಜ್ಞಾನಿಗಳು ಹಾಗೂ ಸಿಬ್ಬಂದಿಗೆ ರಾಜ್ಯದ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ, ಹೆಚ್‌.ಡಿ.ದೇವೇಗೌಡರು ಸೇರಿ ಹಲವು ಗಣ್ಯರು ಸೋಶಿಯಲ್‌ ಮೀಡಿಯಾದಲ್ಲಿ ಸಂತಸ ಹಂಚಿಕೊಂಡಿದ್ದಾರೆ.

ಭಾರತ ವಿಕ್ರಮ ಸಾಧಿಸಿದೆ. ನಮೆಲ್ಲರ ಕನಸು ನನಸಾಗಿದೆ, ನೂರಾ ಇಪ್ಪತ್ತೈದು ಕೋಟಿ ಭಾರತೀಯರ ನಿರೀಕ್ಷೆ ನಿಜವಾಗಿದೆ. @ISRO ನಮ್ಮ ಹೆಮ್ಮೆ ಎಂದು ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಶ್ಲಾಘಿಸಿದ್ದಾರೆ.
ಭಾರತೀಯರ ಹೆಮ್ಮೆಯ ಚಂದ್ರಯಾನ-3 ಯಶಸ್ಸುಗೊಳಿಸಿದ ಇಸ್ರೋ ಸಂಸ್ಥೆಗೆ ಹಾಗೂ ವಿಜ್ಞಾನಿಗಳಿಗೆ ಅಭಿನಂದನೆಗಳು ಎಂದು ಮಾಜಿ ಸಚಿವ ಸೋಮಣ್ಣ ಶುಭಹಾರೈಸಿದ್ದಾರೆ.

ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ TwitterFacebook YoutubeInstagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Related Articles

- Advertisement -spot_img

Latest Articles