ಲಂಡನ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಯೂರೋಪ್ ಪ್ರವಾಸದಲ್ಲಿದ್ದು, ಅಲ್ಲಿಯೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಭಾರತದಲ್ಲಿ ಪ್ರಜಾಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ನಡೆಸಲಾಗುತ್ತಿದ್ದು, ಸಂವಿಧಾನದ ರಚನೆಯನ್ನು ನಿಗ್ರಹಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಬ್ರೂಸೆಲ್ಸ್ನಲ್ಲಿ ಮಾತನಾಡಿದ ರಾಹುಲ್, ಭಾರತದಲ್ಲಿ ತಾರತಮ್ಯ ಹಿಂಸೆ ಹೆಚ್ಚಾಗಿದೆ. ದೇಶದಲ್ಲಿ ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲೆ ದಾಳಿ ನಡೆಯತ್ತಿರುವುದು ಎಲ್ಲರಿಗೂ ಗೊತ್ತಿದೆ’ ಎಂದರು.
ಈ ವಿಷಯಗಳ ಬಗ್ಗೆ ಐರೋಪ್ಯ ಒಕ್ಕೂಟದ ಸದಸ್ಯರು ತುಂಬಾ ಕಳವಳ ವ್ಯಕ್ತಪಡಿಸಿದ್ದಾರೆ. ಸಂವಿಧಾನದ ರಚನೆಗಳನ್ನು ನಿಗ್ರಹಿಸುತ್ತಿರುವ ಪ್ರಯತ್ನಗಳು ಅವರ ಗಮನಕ್ಕೆ ಬಂದಿದೆ ಎಂದೂ ರಾಹುಲ್ ಗಾಂಧಿ ಹೇಳಿದರು.
ನನ್ನ ಪ್ರಕಾರ ಭಾರತವು ಖಂಡಿತವಾಗಿಯೂ ಸಂಬಂಧವನ್ನು ಹೊಂದಿದೆ. ರಷ್ಯಾ ಮತ್ತು ಭಾರತವು ಅಮೆರಿಕದೊಂದಿಗೆ ಸಂಬಂಧ ಹೊಂದಿದೆ. ಭಾರತ ದೊಡ್ಡ ದೇಶವಾಗಿದ್ದು, ಹಲವು ದೇಶಗಳೊಂದಿಗೆ ಸಂಬಂಧ ಹೊಂದಿದೆ. ಇದು ಸಾಮಾನ್ಯ ಸಂಗತಿ ಎಂದರು.
ಇದನ್ನೂ ಓದಿ: ಕಾಂಗ್ರೆಸ್ ಯೋಜನೆಗಳ ಮೆಚ್ಚಿ, ಸಿಎಂಗೆ ಪತ್ರ ಬರೆದ ವಿದ್ಯಾರ್ಥಿನಿ
ರಷ್ಯಾ-ಉಕ್ರೇನ್ ಯುದ್ಧದ ಬಗ್ಗೆ ಪ್ರತಿಕ್ರಿಯಿಸಿದ ರಾಹುಲ್, ಪ್ರತಿಪಕ್ಷಗಳು ಸರ್ಕಾರದ ನಿಲುವನ್ನು ಸಂಪೂರ್ಣವಾಗಿ ಒಪ್ಪಿಕೊಳ್ಳುತ್ತವೆ ಎಂದು ನಾನು ಭಾವಿಸುತ್ತೇನೆ. ನಾವು ರಷ್ಯಾದೊಂದಿಗೆ ಸಂಬಂಧ ಹೊಂದಿದ್ದೇವೆ ಮತ್ತು ಪ್ರತಿಪಕ್ಷಗಳು ಒಪ್ಪುವುದಿಲ್ಲ ಎಂದು ನನಗೆ ಅನಿಸುವುದಿಲ್ಲ ಎಂದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.