Thursday, June 8, 2023
spot_img
- Advertisement -spot_img

ಶ್ರೀ ಶಿವಕುಮಾರ ಶ್ರೀಗಳ 116ನೇ ಜಯಂತಿ: ಟ್ವೀಟ್ ಮಾಡಿ ಸ್ಮರಿಸಿದ ಪ್ರಧಾನಿ

ತುಮಕೂರು: ಇಂದು ನಡೆದಾಡುವ ದೇವರು ತ್ರಿವಿಧ ದಾಸೋಹಿ ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮೀಜಿಯವರ 116ನೇ ಜಯಂತಿ, ಜನ್ಮದಿನ ಹಿನ್ನೆಲೆಯಲ್ಲಿ ಶ್ರೀಗಳ ಗದ್ದುಗೆಗೆ ದೀಪಾಲಂಕಾರ, ಪುಷ್ಪಗಳಿಂದ ಅಲಂಕಾರ ಮಾಡಲಾಗಿದೆ.

ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕನ್ನಡದಲ್ಲೇ ಟ್ವೀಟ್ ಮಾಡಿ ಶ್ರೀಗಳನ್ನು ಸ್ಮರಿಸಿದ್ದಾರೆ.

ತುಮಕೂರು ಭೇಟಿ ವೇಳೆಯ ಭಾಷಣದ ತುಣಕ್ಕೊಂದು ಮೋದಿಯವರು ಹಂಚಿಕೊಂಡಿದ್ದು, ಅದರಲ್ಲಿ ಸಿದ್ದಗಂಗಾ ಶ್ರೀಗಳು ಗುಜರಾತ್​ನ ನರೇಂದ್ರ ಮೋದಿಯವರ ಮನೆಗೆ ಭೇಟಿ ನೀಡಿ ತುಮಕೂರಿಗೆ ಬನ್ನಿ ಎಂದು ಆಹ್ವಾನಿಸಿರೋದನ್ನು ಉಲ್ಲೇಖಿಸಿದ್ದಾರೆ.

“ಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟು ಹಬ್ಬದ ಈ ವಿಶೇಷ ಸಂದರ್ಭದಲ್ಲಿ ಅವರಿಗೆ ನನ್ನ ನಮನ. ಅವರು ಲಕ್ಷಾಂತರ ಜನರ ಮೇಲೆ ಅಪಾರ ಪ್ರಭಾವ ಬೀರಿದ್ದಾರೆ. ಸಮಾಜಸೇವೆಗೆ ಉನ್ನತ ಸ್ಥಾನ ಮತ್ತು ಜನರನ್ನು ಸಶಕ್ತಗೊಳಿಸುವುದಕ್ಕೆ ಅವರು ಪ್ರಾಮುಖ್ಯತೆ ನೀಡಿದ್ದರು. ಅವರ ಕನಸುಗಳನ್ನು ಪೂರೈಸಲು ನಾವು ಸದಾ ಶ್ರಮಿಸುತ್ತೇವೆ.” ಎಂದು ಮೋದಿಯವರು ಟ್ವೀಟ್​ ಮಾಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿ, ಶತಮಾನ ಕಂಡ ಶ್ರೇಷ್ಠ ಸಂತ, ತ್ರಿವಿಧ ದಾಸೋಹಿ ಸಿದ್ದಗಂಗೆಯ ಲಿಂಗೈಕ್ಯ ಪರಮಪೂಜ್ಯ ಡಾ:ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಜನ್ಮಸ್ಮರಣೆಯಂದು ಅವರಿಗೆ ಭಕ್ತಿಪೂರ್ವಕ ನಮನಗಳು. ಕಾಯಕ, ಶಿಕ್ಷಣ ಹಾಗೂ ದಾಸೋಹಕ್ಕೆ ಮಹತ್ವ ನೀಡಿ, ಸಮಾಜವನ್ನು ಪರಿವರ್ತಿಸುವ ಹಾದಿಯಲ್ಲಿ ಶ್ರೀಗಳು ರೂಪಿಸಿರುವ ಪರಂಪರೆ ಶತಶತಮಾನಗಳವರೆಗೆ ಮುಂದುವರೆಯಲಿ ಎಂದು ಹೇಳಿದ್ದಾರೆ.

ಕೇಂದ್ರ ಸಚಿವ ಅಮಿತ್ ಶಾ ಅವರೂ ಕೂಡ ಕನ್ನಡದಲ್ಲಿ ಟ್ವೀಟ್ ಮಾಡಿದ್ದು, ಸಿದ್ದಗಂಗಾ ಮಠದ ಲಿಂಗೈಕ್ಯ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಯವರಿಗೆ ಅವರ ಜಯಂತಿಯಂದು ಶಿರಬಾಗಿ ನಮಿಸುತ್ತೇನೆ. ನಡೆದಾಡುವ ದೇವರು ಸಮಾಜ ಸೇವೆಗಳ ಮೂಲಕ ಅಪಾರ ಜನರ ಜೀವನ ಪರಿವರ್ತನೆಗೊಳಿಸಿದ್ದಾರೆ. ಹಲವು ಸಂಸ್ಥೆಗಳ ಮೂಲಕ ನಿಸ್ವಾರ್ಥ ಸೇವೆಯ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ಅವರ ಕಾರ್ಯ ಮುಂದಿನ ಪೀಳಿಗೆಗಳಿಗೂ ಪ್ರೇರಣೆ ನೀಡಲಿದೆ ಎಂದು ತಿಳಿಸಿದ್ದಾರೆ.





Related Articles

- Advertisement -spot_img

Latest Articles