ಬೆಂಗಳೂರು: ಬಿಜೆಪಿ ಸರ್ಕಾರ ಇವತ್ತು ದೊಡ್ಡದಾಗಿ ಜಾಹೀರಾತು ನೀಡಿದೆ. ಇವರು ಅಧಿಕಾರಕ್ಕೆ ಬಂದು ಇಷ್ಟು ವರ್ಷಗಳಲ್ಲಿ ಮಹಿಳಾ ಪರ ಯೋಜನೆಗಳನ್ನು ನೀಡಿಲ್ಲ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಟೀಕಿಸಿದರು.
‘ನಾ ನಾಯಕಿ’ ಸಮಾವೇಶದಲ್ಲಿ ಮಾತನಾಡಿ, ಬಿಜೆಪಿಯವರು ಮಹಿಳೆಯರ ಪರವಾಗಿಲ್ಲ. ಅಧಿಕಾರಕ್ಕೆ ಬಂದು ಮೂರೂವರೆ ವರ್ಷಗಳಾದರೂ ಮಹಿಳೆಯರ ಪರವಾಗಿ ಯೋಜನೆಗಳನ್ನು ನೀಡಿಲ್ಲ , ನಾವು ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್ ನೀಡುವ ಭರವಸೆ ನೀಡಿದ್ದೇವೆ.
ನಾವು ಈ ಭರವಸೆ ನೀಡಿದ ಬಳಿಕ ಬಿಜೆಪಿಯವರಿಗೆ ಈಗ ಎಚ್ಚರವಾಗಿದೆ. ಅವರು ನೀಡಿದ ಭರವಸೆಗಳ ಪೈಕಿ ಈವರೆಗೆ ಕೇವಲ 50-60ರಷ್ಟು ಮಾತ್ರ ಈಡೇರಿವೆ. ಉಳಿದ ಯಾವ ಭರವಸೆಗಳನ್ನೂ ಈಡೇರಿಸಿಲ್ಲ. ಬಿಜೆಪಿ ಪಕ್ಷ ಮಹಿಳೆಯರ ಪರವಾಗಿಲ್ಲ ಎಂದು ಆರೋಪಿಸಿದ್ದಾರೆ.
ನಾವು ಅಧಿಕಾರಕ್ಕೆ ಬಂದರೆ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡುತ್ತೇವೆ. ಮಹಿಳೆಯರಿಗೆ ರಾಜಕೀಯದಲ್ಲಿ ಶೇ 33 ಮೀಸಲಾತಿ ನೀಡುತ್ತೇವೆ. ವಿಧಾನಸಭೆ, ಪರಿಷತ್, ಲೋಕಸಭೆಯಲ್ಲಿ ಕೂಡ ಮೀಸಲಾತಿ ನೀಡುತ್ತೇವೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದರು. ಮತ್ತೆ ಪಕ್ಷದ ಪ್ರಮುಖ ನಾಯಕರಾಗಿರುವ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ ಜೊತೆಯಾಗಿ ಪ್ರಿಯಾಂಕಾ ಅವರ ಎಡಬಲ ನಿಂತು ದೀಪ ಬೆಳಗಿಸಿದ್ದು ನೆರೆದಿದ್ದ ಸಾವಿರಾರು ಮಹಿಳೆಯರ ಗಮನ ಸೆಳೆಯಿತು.