ನವದೆಹಲಿ: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ನಂತರ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ತಾತ್ಕಾಲಿಕವಾಗಿ ಜೈಪುರಕ್ಕೆ ಶಿಫ್ಟ್ ಆಗಿದ್ದಾರೆ.
ಸೋನಿಯಾ ಗಾಂಧಿ ಅವರು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಾರೆ ಮತ್ತು ವೈದ್ಯರು ತಾತ್ಕಾಲಿಕವಾಗಿ ಗಾಳಿಯ ಗುಣಮಟ್ಟ ಉತ್ತಮವಾಗಿರುವ ಸ್ಥಳಕ್ಕೆ ತೆರಳಲು ಸಲಹೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಹಾಸನಾಂಬಾ ದೇವಿಯ ದರ್ಶನ ಪಡೆದ ಶಾಸಕಿ ನಯನಾ ಮೋಟಮ್ಮ
ಖಾಸಗಿ ವಾಯು ಗುಣಮಟ್ಟ ಮಾನಿಟರಿಂಗ್ ವೆಬ್ಸೈಟ್ aqi.in ಪ್ರಕಾರ ಮಂಗಳವಾರ ದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು 375 ಆಗಿದ್ದು, ಇದು ‘ತೀವ್ರ’ ವಿಭಾಗದಲ್ಲಿದೆ, ಜೈಪುರದ ಅಂಕಿಅಂಶವು 72 ಆಗಿದ್ದು, ‘ಮಧ್ಯಮ’ ವಿಭಾಗದಲ್ಲಿದೆ.
ಈ ವರ್ಷದ ಕೊನೆಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ವಿವಿಧ ರಾಜ್ಯಗಳಲ್ಲಿ ರ್ಯಾಲಿಗಳಲ್ಲಿ ಭಾಗವಹಿಸಲು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಬುಧವಾರ ಛತ್ತೀಸ್ಗಢಕ್ಕೆ ತೆರಳುವ ಮೊದಲು ಮಂಗಳವಾರ ರಾತ್ರಿ ಜೈಪುರದಲ್ಲಿ ತಾಯಿ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಲಿದ್ದಾರೆ. ರ್ಯಾಲಿ ನಂತರ ಮತ್ತೆ ಜೈಪುರಕ್ಕೆ ಹಿಂತಿರುಗುತ್ತಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ನಾನು ಸದಾ ವಿಜಯೇಂದ್ರ ಜೊತೆಗಿರುತ್ತೇನೆ: ನಳಿನ್ ಕುಮಾರ್ ಕಟೀಲ್
ದೆಹಲಿಯಲ್ಲಿನ ಮಾಲಿನ್ಯದಿಂದ ರಕ್ಷಿಸಿಕೊಳ್ಳಲು ಸೋನಿಯಾ ಗಾಂಧಿ ಬೇರೆ ನಗರಕ್ಕೆ ಹೋಗುತ್ತಿರುವುದು ಇದೇ ಮೊದಲಲ್ಲ. 2020 ರ ಚಳಿಗಾಲದಲ್ಲಿ, ಸೋನಿಯಾ ಗಾಂಧಿ ತಮ್ಮ ವೈದ್ಯರ ಸಲಹೆಯ ಮೇರೆಗೆ ಗೋವಾಕ್ಕೆ ಹೋಗಿದ್ದರು.
ಕನ್ನಡದಲ್ಲಿ ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ನಮ್ಮ ಸೋಶಿಯಲ್ ಮೀಡಿಯಾ ಪುಟಗಳಾದ Twitter, Facebook , Youtube, Instagram ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.